ಕರ್ನಾಟಕ

karnataka

ನಾಳೆ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಕಲ ಸಿದ್ಧತೆ

By

Published : Jul 4, 2019, 5:16 PM IST

ನಾಳೆ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಚಾಮುಂಡೇಶ್ವರಿ ದೇವಸ್ಥಾನ

ಮೈಸೂರು:ನಾಳೆಯಿಂದ ಆಷಾಢ ಶುಕ್ರವಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ದೇವಸ್ಥಾನದ ಒಳಗೆ ಮೆಟ್ಟಲುಗಳಿಗೆ ಬಣ್ಣ ಹಚ್ಚಲಾಗುತ್ತಿದೆ. ಅಲ್ಲದೇ ದೇವಸ್ಥಾನದ ಒಳಗೆ ಹಾಗೂ ಹೊರಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಚಾಮುಂಡೇಶ್ವರಿ ದೇವಸ್ಥಾನ

ದೇವಸ್ಥಾನಕ್ಕೆ ಆಗಮಿಸುವವರಿಗೆ ವಿಶೇಷ ದರ್ಶನ ಹಾಗೂ ಧರ್ಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 32 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 3ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಯದು ವಂಶಸ್ಥರಾದ ಪ್ರಮೋದಾದೇವಿ ಒಡೆಯರ್​​ ಹಾಗೂ ಯದುವೀರ್ ಬೆಳಗ್ಗೆ 5ಕ್ಕೆ ಅವರ ಕುಲದೇವತೆಯ ದರ್ಶನ ಪಡೆಯಲಿದ್ದಾರೆ.

For All Latest Updates

TAGGED:

ABOUT THE AUTHOR

...view details