ಕರ್ನಾಟಕ

karnataka

ETV Bharat / state

ಮೈಸೂರು: ಕಪಿಲಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ - ನಂಜನಗೂಡಿನಲ್ಲಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ನಂಜನಗೂಡಿನ ಕಪಿಲಾ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Woman commits suicide in Mysuru
ಕಪಿಲಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

By

Published : Dec 21, 2020, 7:55 PM IST

ಮೈಸೂರು:ಮಾನಸಿಕ ಖಿನ್ನತೆ ಮತ್ತು ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ನಂಜನಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ವಿಜಯನಗರದ ಮಹದೇವಪ್ಪ ಎಂಬುವರ ಪತ್ನಿ ಸವಿತಾ (48) ಮೃತ ದುರ್ದೈವಿ. ನಂಜುಂಡೇಶ್ವರ ದೇವಾಲಯದ ಹೆಜ್ಜಿಗೆ ಸೇತುವೆಯಿಂದ ನದಿಗೆ ಹಾರಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಲು ಯತ್ನಿಸಿದ್ದರು. ಆದರೆ ಅಷ್ಟರಲ್ಲಿ ಮಹಿಳೆಯ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಇದನ್ನೂ ಓದಿ : ಕುಡಿತದ ಚಟ.. ರೋಸಿ ಹೋದ ಪೋಷಕರಿಂದಲೇ ಮಗನ ಹತ್ಯೆ?

ಮೃತ ಮಹಿಳೆ ನಂಜನಗೂಡಿನ ಕಾಳಿಹುಂಡಿ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details