ಕರ್ನಾಟಕ

karnataka

By

Published : Jun 20, 2021, 12:35 PM IST

Updated : Jun 21, 2021, 7:56 AM IST

ETV Bharat / state

ಮೈಸೂರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಸಾವು

ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Woman died
ಗೃಹಿಣಿ ಸಾವು

ಮೈಸೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ತಿ‌‌.ನರಸೀಪುರ ತಾಲೂಕು ಯಾಕನೂರು ಗ್ರಾಮದ ಕಾವ್ಯ (21) ಮೃತ ದುರ್ದೈವಿ.

ಕಾವ್ಯಾಗೆ ಒಂದೂವರೆ ವರ್ಷದ ಹಿಂದೆ ಯಾಕನೂರು ಗ್ರಾಮದ ಸುರೇಶ್ ಎಂಬಾತನೊಂದಿಗೆ ವಿವಾಹವಾಗಿತ್ತು. 'ನನ್ನನ್ನು ಮಗನಿಂದ ದೂರ ಮಾಡಿದ್ದೀಯ ಎಂದು ಅತ್ತೆ ಪುಟ್ಟಮಾದಮ್ಮ ಕಿರುಕುಳ ಕೊಡುತ್ತಿದ್ದರು, ಅಲ್ಲದೆ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು' ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ತೆಯ ಕಿರುಕುಳಕ್ಕೆ ಬೇಸತ್ತ ಕಾವ್ಯ 3 ದಿನಗಳ ಹಿಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆಕೆಯನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾವ್ಯಾಳ ಮೃತದೇಹ

ಮೃತ ಕಾವ್ಯಳ ಪೋಷಕರು ಮಗಳ ಸಾವು ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂಓದಿ: ವರದಕ್ಷಿಣೆ ದಾಹ: ಪತ್ನಿ, ಮಗುವನ್ನು ಬಿಟ್ಟು ಹೋದ ಭೂಪ!

Last Updated : Jun 21, 2021, 7:56 AM IST

ABOUT THE AUTHOR

...view details