ಕರ್ನಾಟಕ

karnataka

By

Published : Jun 22, 2019, 8:00 PM IST

ETV Bharat / state

ಜಯಚಾಮರಾಜೇಂದ್ರ ಒಡೆಯರ್ ಜಯಂತಿಯನ್ನು ಸರ್ಕಾರ ಮಾಡಬೇಕಿತ್ತು: ಯದುವೀರ್

ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಆಯೋಜಿಸಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಪಾಲ್ಗೊಂಡರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು:ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನವನ್ನು ಸರ್ಕಾರ ಮಾಡಿದರೆ ಒಳ್ಳೆಯದಿತ್ತು ಎಂದು ಯದುವೀರ್ ಒಡೆಯರ್​ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಮೈಸೂ ಯದುವೀರ್ ಒಡೆಯರ್

ಇಂದು ನವಮೈಸೂರು ನಿರ್ಮಾಣದ ದೊರೆ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅರಮನೆಗೂ ಕನ್ನಡ ಸಾಹಿತ್ಯ ಪರಿಷತ್​ಗೂ ಅವಿನಾಭಾವ ಸಂಬಂಧವಿದೆ ಇಂತಹ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿರುವುದು ಬಹಳ ಸಂತೋಷ ತಂದಿದೆ ಎಂದಿದ್ದಾರೆ.

ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನವನ್ನು ಸರ್ಕಾರವೇ ಮಾಡಿದರೆ ಒಳ್ಳೆಯದಿತ್ತು. ಏಕೆಂದರೆ ಅವರ ಕಾಲದಲ್ಲಿಯೇ ಕರ್ನಾಟಕವನ್ನು ಭಾರತ ದೇಶದ ಒಕ್ಕೂಟ ವ್ಯವಸ್ಥೆಗೆ ಸೇರಿಸಲಾಗಿದೆ. ಜನ್ಮ ದಿನಾಚರಣೆ ಆಚರಿಸುವುದು ಬಿಡುವುದು ಸರ್ಕಾರದ ಇಚ್ಚೆಗೆ ಸೇರಿದ್ದು ಎಂದು ಹೇಳಿದರು.

ಯೋಗ ದಿನಾಚರಣೆಯ ಅನುಪಸ್ಥಿತಿ ಬಗ್ಗೆ ಮಾತನಾಡುತ್ತಾ, ನಾನು ನಿನ್ನೆ ಊರಿನಲ್ಲಿ ಇರಲಿಲ್ಲ. ಹಾಗಾಗಿ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗಿಲ್ಲ ಎಂದರು.

For All Latest Updates

TAGGED:

ABOUT THE AUTHOR

...view details