ಕರ್ನಾಟಕ

karnataka

By

Published : Aug 23, 2021, 7:23 PM IST

Updated : Aug 23, 2021, 8:36 PM IST

ETV Bharat / state

ಮೈಸೂರು: ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿ

ಇಂದು ದರೋಡೆಕೋರರು ನಗರದಲ್ಲಿರುವ ಚಿನ್ನಾಭರಣ ಅಂಗಡಿಗೆ ನುಗ್ಗಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಯುವಕನ ತಲೆಗೆ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದರಿಂದ ಮೈಸೂರು ಜನತೆ ಬೆಚ್ಚಿ ಬಿದ್ದಿದ್ದಾರೆ.

Mysore
ಮೈಸೂರು

ಮೈಸೂರು:ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿಯಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ದಡದಹಳ್ಳಿ ಗ್ರಾಮದ ಚಂದ್ರು (23) ಮೃತ ಯುವಕ ಎಂದು ಗುರುತಿಸಲಾಗಿದೆ.

ನಗರದಲ್ಲಿರುವ ಚಿನ್ನಾಭರಣ ಅಂಗಡಿ

ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ ಅಮೃತ್ ಗೋಲ್ಡ್ ಅಂಡ್​ ಸಿಲ್ವರ್ ಅಂಗಡಿಗೆ ದರೋಡೆಕೋರರು ನುಗ್ಗಿ ಚಿನ್ನಾಭರಣ ಕದಿಯಲು ಯತ್ನಿಸಿದ್ದರು. ಇದನ್ನು ತಡೆಯಲು ಮುಂದಾದ ಮಾಲೀಕನ ಮೇಲೆ ಗುಂಡಿನ ದಾಳಿ ಮಾಡಿದ್ದರು.

ಮೃತ ಯುವಕ

ಈ ವೇಳೆ, ರಸ್ತೆಯಲ್ಲಿದ್ದ ಯುವಕನ ತಲೆಗೆ ಗುಂಡು ಹೊಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತ್ತ ಅಂಗಡಿ ಮಾಲೀಕ ಧರ್ಮೇಂದ್ರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ದರೋಡೆಕೋರರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ: ಪ್ರೇಮಿಸಿ ಮದ್ವೆ.. 4 ವರ್ಷ ಜತೆಗಿದ್ದು, ದುಡ್ಡಿಲ್ಲವೆಂದು ಮತ್ತೊಬ್ಬನ ಕೈಹಿಡಿದಳು.. ಕೈಕೊಟ್ಲಪ್ಪೋ ಅಂತಾವ್ನೇ ರವಿ..

Last Updated : Aug 23, 2021, 8:36 PM IST

ABOUT THE AUTHOR

...view details