ಕರ್ನಾಟಕ

karnataka

ರಾಯಚೂರು: 100 ಮಂದಿಗೆ ಸೋಂಕು, ಮೂವರು ಬಲಿ

ಜಿಲ್ಲೆಯಲ್ಲಿಂದು ಬರೋಬ್ಬರಿ 100 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ.

By

Published : Aug 21, 2020, 8:05 PM IST

Published : Aug 21, 2020, 8:05 PM IST

Raichur corona cases
Raichur corona cases

ರಾಯಚೂರು: ಜಿಲ್ಲೆಯಲ್ಲಿ ಮಹಾಮಾರಿ‌ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. 100 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಯಚೂರು ತಾಲೂಕಿನಲ್ಲಿ 32, ಮಾನವಿ 19, ಲಿಂಗಸೂಗೂರು 1, ಸಿಂಧನೂರು 31, ದೇವದುರ್ಗ 17 ಪ್ರಕರಣಗಳು ವರದಿಯಾಗುವ ಮೂಲಕ ಸೋಂಕಿತರ ಸಂಖ್ಯೆ 5,730 ತಲುಪಿದೆ. ಇಲ್ಲಿಯವರೆಗೆ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 4,161 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 1,498 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಪತ್ತೆಯಾಗಿರುವ ಸೋಂಕಿತರನ್ನು ಸೋಂಕಿನ ಗುಣಲಕ್ಷಣದ ಆಧಾರದ ಮೇಲೆ ಚಿಕಿತ್ಸೆಗೆ ದಾಖಲಿಸಿ, ಸಂಪರ್ಕಿತರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details