ರಾಯಚೂರು: ಕೊರೊನಾ ಮುಕ್ತ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಅರಕೇರಾ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘವು 50 ಸಾವಿರ ರೂಪಾಯಿ ದೇಣಿಗೆ ನೀಡಿದೆ.
ಕೊರೊನಾ ಮುಕ್ತ ಭಾರತಕ್ಕೆ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದಿಂದ 50 ಸಾವಿರ ದೇಣಿಗೆ
ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಣಿಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದರು.
ಸಂಘದ ಅಧ್ಯಕ್ಷೆ ಶ್ರೀದೇವಿನಾಯಕ
ಸಂಘದ ಅಧ್ಯಕ್ಷೆ ಶ್ರೀದೇವಿ ನಾಯಕ ಕೆಪಿಸಿಸಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಕೊರೊನಾದಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕೊರೊನಾ ವೈರಸ್ನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಸಂಘದಿಂದ 50 ಸಾವಿರ ರೂಪಾಯಿ ನೀಡಲಾಗಿದೆ.