ಕರ್ನಾಟಕ

karnataka

ETV Bharat / state

ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ 61 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ನಾರಾಯಣಪುರ ಅಣೆಕಟ್ಟೆಯಿಂದ 61 ಸಾವಿರ ಕ್ಯೂಸೆಕ್​ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

By

Published : Aug 6, 2020, 10:25 PM IST

61 thousand cusec water to the Krishna River
61 ಸಾವಿರ ಕ್ಯುಸೆಕ್ ನೀರು ಕೃಷ್ಣಾ ನದಿಗೆ

ಲಿಂಗಸುಗೂರು: ರಾಯಚೂರು, ಯಾದಗಿರಿ ಜಿಲ್ಲೆಗಳ ಮಧ್ಯೆ ಗಡಿ ಭಾಗದಲ್ಲಿರುವ ಕೃಷ್ಣಾ ನದಿಗೆ ಗುರುವಾರ ಸಂಜೆ 61,350 ಕ್ಯೂಸೆಕ್ ನೀರು ಬಿಡಲಾಗಿದೆ.

61 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ

ನಾರಾಯಣಪುರ ಅಣೆಕಟ್ಟೆಯ ಗರಿಷ್ಠ ಮಟ್ಟ 4,92.25ಮೀ ಪೈಕಿ 4,91,420 ಮೀ. ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ.

ಅಣೆಕಟ್ಟೆಯ 9 ಕ್ರೆಸ್ಟ್ ಗೇಟ್ ಮೂಲಕ ನೀರು ಹರಿಸಲಾಗುತ್ತಿದೆ. ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆ ಬೀಳುತ್ತಿದ್ದು, ನದಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಾಗಲಿದೆ ಎಂದು ಅಣೆಕಟ್ಟೆ ಕಿರಿಯ ಎಂಜಿನಿಯರ್ ವಿಜಯಕುಮಾರ ಅರಳಿ ತಿಳಿಸಿದ್ದಾರೆ.

ABOUT THE AUTHOR

...view details