ರಾಯಚೂರು: ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮಗ ಜೈಲು ಪಾಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ - ರಾಯಚೂರು ಸುದ್ದಿ
ಕೊಲೆ ಪ್ರಕರಣದಲ್ಲಿ ಮಗ ಜೈಲು ಸೇರಿದ ಎಂದು ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
![ಮಗ ಜೈಲು ಪಾಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ ಮಗ ಜೈಲು ಪಾಲಾಗಿದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ](https://etvbharatimages.akamaized.net/etvbharat/prod-images/768-512-8633840-416-8633840-1598930813761.jpg)
ಮಗ ಜೈಲು ಪಾಲಾಗಿದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ
ಜಿಲ್ಲೆಯ ದೇವದುರ್ಗ ತಾಲೂಕಿನ ಮಶಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ನಿಂಗಪ್ಪ ದಂಡಪ್ಪ(68) ಆತ್ಮಹತ್ಯೆ ಮಾಡಿಕೊಂಡವ. ಹಿರಿಯ ಮಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಈ ವಿಚಾರಕ್ಕೆ ನಿಂಗಪ್ಪ ಮದ್ಯಪಾನದ ದಾಸನಾಗಿದ್ದ ಎನ್ನಲಾಗಿದೆ. ಮಗನ ಈ ಸ್ಥಿತಿ ಕಂಡು ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕಲಂ-174 ಅನ್ವಯ ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ.