ಕರ್ನಾಟಕ

karnataka

ETV Bharat / state

ಟಾಟಾ ಏಸ್ ​- ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು, ಒಬ್ಬನಿಗೆ ಗಾಯ - road accident in raichur

ರಾಯಚೂರಿನಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ಕು ಜನ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಟಾಟಾಏಸ್​ ಲಾರಿ ನಡುವೆ ಭೀಕರ ಅಪಘಾತ
ಟಾಟಾಏಸ್​ ಲಾರಿ ನಡುವೆ ಭೀಕರ ಅಪಘಾತ

By ETV Bharat Karnataka Team

Published : Dec 7, 2023, 12:29 PM IST

Updated : Dec 7, 2023, 12:59 PM IST

ರಾಯಚೂರು: ಟಾಟಾ ಏಸ್​ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.

ಇಸ್ಮಾಯಿಲ್ ರಷೀದ್ (25), ರವಿ ರಾಜಪ್ಪ (20), ರಮೇಶ ನಿಂಗಪ್ಪ ಕಣೇಕಲ್ಲೂರು (28), ಅಂಬರೀಶ್​ ಸೂಗಪ್ಪ ಕಣೇಕಲ್ಲೂರು (28) ಮೃತದುರ್ದೈವಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಸಾಯಿಸಂಗಮ ಸಪ್ಲಯರ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಮೃತರು ಟಾಟಾ ಏಸ್​ನಲ್ಲಿ ಮುದ್ದಾಪುರಗೆ ತೆರಳುತ್ತಿದ್ದರು. ಈ ವೇಳೆ, ಮಸ್ಕಿಯಿಂದ ಸಿಂಧನೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಏಸ್​ನಲ್ಲಿದ್ದ ಐದು ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಸಮೀರ್ ಮನೋಜ್ ಬಂಗಾಲಿ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೃತ ವ್ಯಕ್ತಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ವೀರಾರೆಡ್ಡಿ, ಪಿಎಸ್‌ಐ ಮಹ್ಮದ್ ಇಷಾಕ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಕಾರು - ಟಿಪ್ಪರ್​ ನಡುವೆ ಅಪಘಾತ(ಬೆಳಗಾವಿ):ಟಿಪ್ಪರ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಿಂದ ಟಿಪ್ಪರ್​ ವಾಹನದ ಡೀಸೆಲ್​ ಟ್ಯಾಂಕರ್​ ಸ್ಫೋಟಗೊಂಡು ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ - ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೋಹನ್ ಮಾರುತಿ ಬೆಳ್ಗಾಂವಕರ್​ (24), ಬಾಲಕಿ ಸಮಿಕ್ಷಾ ಡಿಯೇಕರ್ (12) ಮೃತರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿಕೊಂಡು ಬರುವಾಗ ಅಪಘಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೂಡ್ಸ್ ಟೆಂಪೋಗೆ ವಾಹನ ಡಿಕ್ಕಿ( ದಕ್ಷಿಣ ಕನ್ನಡ): ಗೂಡ್ಸ್ ಟೆಂಪೋಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನ ಗುಂಡ್ಯ ಕೆಂಪು ಹೊಳೆ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿತ್ತು.

ಇದನ್ನೂ ಓದಿ:ಬೆಳಗಾವಿಯಲ್ಲಿ ಕಾರು - ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ.. ಇಬ್ಬರು ಸಜೀವ ದಹನ

Last Updated : Dec 7, 2023, 12:59 PM IST

ABOUT THE AUTHOR

...view details