ಕರ್ನಾಟಕ

karnataka

ETV Bharat / state

ರಸ್ತೆ ದಾಟುವಾಗ ಟ್ಯಾಂಕರ್​​​​​ ಡಿಕ್ಕಿ: ಬಾಲಕಿ ಸಾವು - kannada news

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ರಸ್ತೆ ದಾಟುವಾಗ ಟ್ಯಾಂಕರ್ ಡಿಕ್ಕಿ: ಬಾಲಕಿ ಸಾವು

By

Published : May 28, 2019, 3:23 AM IST

ರಾಯಚೂರು :ರಸ್ತೆ ದಾಟುವ ವೇಳೆ ಬಾಲಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಕೀರ್ತಿ(12) ಮೃತ ಬಾಲಕಿಯೆಂದು ಗುರುತಿಸಲಾಗಿದೆ. ಅಂಗಡಿಗೆಂದು ತೆರಳುವಾಗ ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬಾಲಕಿಯನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ABOUT THE AUTHOR

...view details