ಕರ್ನಾಟಕ

karnataka

ETV Bharat / state

ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ: ಅಮಿತ್ ಶಾ - ಸಂಸದ ರಾಜಾ ಅಮರೇಶ್ವರ ನಾಯಕ

ಕರ್ನಾಟಕವನ್ನು ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ, ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

amit-shah-reaction-on-congress
ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ: ಅಮಿತ್ ಶಾ

By

Published : Mar 26, 2023, 6:01 PM IST

Updated : Mar 26, 2023, 7:02 PM IST

ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ: ಅಮಿತ್ ಶಾ

ರಾಯಚೂರು:ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂಯನ್ನಾಗಿ ಮಾಡಿಕೊಂಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇರುವಾಗ ಒಳ್ಳೆಯ ಸರ್ಕಾರ ನೀಡಿದೆಯಾ ಎಂದು ಪ್ರಶ್ನಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ. ಬದಲಾಗಿ ರಾಜ್ಯವನ್ನು ಎಟಿಎಂ ತರಹ ಮಾಡಿಕೊಂಡು ಬಳಸಿಕೊಂಡಿತ್ತು ಎಂದು ಆರೋಪಿಸಿದರು. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಭಿವೃದ್ಧಿಗೆ 4500 ಕೋಟಿ ರೂಪಾಯಿ ನೀಡಲಾಗಿದೆ. ಜಲಜೀವನ ಮಿಷನ್​ ಯೋಜನೆ, ಕೃಷ್ಣ ಜಲಭಾಗ್ಯ ನಿಗಮ, ಲೋಕೋಪಯೋಗಿ ಸೇರಿದಂತೆ ಹಲವು ಇಲಾಖೆ ಕಾಮಗಾರಿ ಉದ್ಘಾಟಿಸಿರುವುದು ಸಂತೋಷವಾಗುತ್ತಿದ್ದು, ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಮೈತ್ರಿ ಸರ್ಕಾರಕ್ಕೆ ಅವಕಾಶ ನೀಡಬೇಡಿ - ಅಮಿತ್​ ಶಾ:ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬರುವುದಕ್ಕೆ ಅವಕಾಶ ನೀಡಬೇಡಿ. ರಾಜ್ಯದ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಾರ್ಟಿಗೆ ಬೆಂಬಲಿಸಿ, ಸಂಪೂರ್ಣ ಬಹುಮತದಿಂದ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್​ ಡಾಲರ್​ಗೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ ಎಂದರು.

ಪಾಕಿಸ್ತಾನ ಭಾರತದ ದೇಶದಲ್ಲಿ ಪುಲ್ವಾಮಾ ದಾಳಿ ನಡೆಸಿತ್ತು. ಅದಕ್ಕೆ ಪ್ರತ್ಯುತ್ತರವಾಗಿ ನರೇಂದ್ರ ಮೋದಿ ನೇತೃತ್ವದ ನಮ್ಮ ಸರ್ಕಾರದಲ್ಲಿ ನಮ್ಮ ಸೈನಿಕರು ಪಾಕಿಸ್ತಾನದೊಳಗೆ ನುಗ್ಗಿ ತಕ್ಕ ಉತ್ತರವನ್ನು ನೀಡಿದ್ದರು. ದೇಶದ ಜನತೆ ಹಾಗೂ ಬಡ ಜನರ ಅಭಿವೃದ್ಧಿಗಾಗಿ ಉಜ್ವಲ ಯೋಜನೆ, ಮನೆಗಳಿಗೆ ಶೌಚಾಲಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೊರೊನಾ ಸಾಂಕ್ರಾಮಿಕ ತಡೆಯುವ ಹಿನ್ನೆಲೆಯಲ್ಲಿ ದೇಶದ ಜನತೆ ಎಲ್ಲರಿಗೂ ಉಚಿತವಾಗಿ ಎರಡು ಡೋಸ್ ವ್ಯಾಕ್ಸಿನ್ ನೀಡಲಾಗಿದೆ ಎಂದು ಹೇಳಿದರು.

ಮುಸ್ಲಿಂ ಸಮುದಾಯಕ್ಕೆ 4ರಷ್ಟು ಮೀಸಲಾತಿ ಇತ್ತು. ಆದರೆ ಅದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅ ಮೀಸಲಾತಿಯನ್ನು ತೆಗೆದು ಹಾಕಿ, ಒಕ್ಕಲಿಗ ಸಮುದಾಯಕ್ಕೆ, ಲಿಂಗಾಯತರಿಗೆ ತಲಾ 2 ರಷ್ಟು ಮೀಸಲಾತಿಯನ್ನು ನೀಡಿದೆ. ಬಿ ಎಸ್ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ‌ ಅಭಿವೃದ್ಧಿ ಮಂಡಳಿಗೆ ಐದು ಸಾವಿರ ಕೋಟಿ ರೂಪಾಯಿ ನೀಡಿದ್ದು, ಇಲ್ಲಿ ಗ್ರೀನ್ ಏರ್‌ಪೋರ್ಟ್ ನಿರ್ಮಾಣವಾಗಲಿದೆ ಎಂದರು.

ಕಾಂಗ್ರೆಸ್​ ಧೂಳಿಪಟ ಆಗಿದೆ- ಅಮಿತ್​ ಶಾ:ಕಾಂಗ್ರೆಸ್ ಅನ್ನು ರಾಹುಲ್​ ಗಾಂಧಿ ಅಭಿವೃದ್ಧಿ ಮಾಡುವುದಿಲ್ಲ, ಅವರಿಂದ ಕಾಂಗ್ರೆಸ್ ಅವನತಿಯಾಗುತ್ತಿದೆ. ಇತ್ತೀಚೆಗೆ ನಡೆದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದ್ದು, ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ರೆಂಡ್ ಇದೆ ಎಂದು ಶಾ ಹೇಳಿದರು.

ಇನ್ನು, ಈ ಕಾರ್ಯಕ್ರಮಕ್ಕೆ ಸಿಎಂ‌‌ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೈರಾಗಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ‌ ಕೆ. ಶಿವನಗೌಡ ನಾಯಕ, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಎಂ ಬೊಮ್ಮಾಯಿ ಅವರು ಸದಾಶಿವ ಆಯೋಗದ ವರದಿಯನ್ನು ಧೈರ್ಯದಿಂದ ಜಾರಿ ಮಾಡಿದ್ದಾರೆ: ಪ್ರಹ್ಲಾದ್​ ಜೋಶಿ

Last Updated : Mar 26, 2023, 7:02 PM IST

ABOUT THE AUTHOR

...view details