ಕರ್ನಾಟಕ

karnataka

ETV Bharat / state

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ - ಈಟಿವಿ ಭಾರತ ಕನ್ನಡ ನ್ಯೂಸ್

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

By

Published : Aug 13, 2022, 6:49 AM IST

Updated : Aug 13, 2022, 8:50 AM IST

ರಾಯಚೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ಸಿಂಗನೋಡಿ‌ ಗ್ರಾಮದ ಸರಸ್ವತಿ(21), ಮಂಡಲಗೇರಾ ಗ್ರಾಮದ ವಿನೋದ(24) ಎಂದು ಗುರುತಿಸಲಾಗಿದೆ.

ಮೃತ ಸರಸ್ವತಿ ಮತ್ತು ವಿನೋದ್​​​ಗೆ ಮನೆಯವರೆಲ್ಲ ಸೇರಿ ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮೊಬೈಲ್​ನಲ್ಲಿ ಮಾತನಾಡುವ ವೇಳೆ ಮಾತಿಗೆ ಮಾತು ಬೆಳೆದು, ಜಗಳವಾಡಿ ಮನನೊಂದು ಮೊದಲು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಈ ಸುದ್ದಿ ತಿಳಿದ ಯುವಕ ಸಹ ಮನನೊಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಸಾವಿಗೆ ನಿಖರ ಕಾರಣ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.

ಓದಿ :ರಾಮನಗರ: ಬೇರೊಬ್ಬ ಹುಡುಗಿ ತೋರಿಸಿ ಅಜ್ಜಿಯ ಠೇವಣಿ ಹಣ ಲಪಟಾಯಿಸಿದ ಖದೀಮರು!

Last Updated : Aug 13, 2022, 8:50 AM IST

ABOUT THE AUTHOR

...view details