ಕರ್ನಾಟಕ

karnataka

ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ: ಸಂಭ್ರಮಿಸಿದ ಬಿಜೆಪಿ‌ ಕಾರ್ಯಕರ್ತರು

By

Published : Dec 9, 2019, 9:13 PM IST

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು ಮತ್ತು ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

BIP won in by election
ಬಿಜೆಪಿ‌ ಕಾರ್ಯಕರ್ತರು

ರಾಯಚೂರು/ವಿಜಯಪುರ:ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು ಮತ್ತು ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಸಂಭ್ರಮಿಸಿದ ಬಿಜೆಪಿ‌ ಕಾರ್ಯಕರ್ತರು

ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೆ ಮಾಡಿಕೊಂಡು ಸಂಭ್ರಮಿಸಿದರು. ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಈ ವೇಳೆ ಮಾತನಾಡಿದ ಶಾಸಕ ಡಾ. ಶಿವರಾಜ್ ಪಾಟೀಲ್, ಈ ಫಲಿತಾಂಶ ವಿಪಕ್ಷಗಳಿಗೆ ಉತ್ತರ ನೀಡುವ ಮೂಲಕ ಸ್ಥಿರ ಸರ್ಕಾರಕ್ಕೆ ಜೈ ಎಂದಿದ್ದಾರೆ.

ಹಾಗೆಯೇ ವಿಜಯಪುರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪಟಾಕಿ‌ ಸಿಡಿಸಿ ಸಿಹಿ ಹಂಚಿ ಘೋಷಣೆ ಜಿಲ್ಲಾ ಬಿಜೆಪಿ‌ ಘಟಕದ ಕಾರ್ಯಕರ್ತರು ಸಂಭ್ರಮಿಸಿದರು.

ಇನ್ನೂ ಬಿಜೆಪಿ‌ ಸರ್ಕಾರ ಮೂರುವರೆ ವರ್ಷಗಳ ಕಾಲ ಸುಭದ್ರವಾಗಿ ಜನರ ಪರವಾದ ಆಡಳಿತ ನೀಡಲಿದೆ. ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ, ಯಡಿಯೂರಪ್ಪ ನೇತೃತ್ವದ ಸರ್ಕಾರ ಬಯಸಿದ್ದಾರೆ ಎಂದು ಜಿಜೆಪಿ ಮುಖಂಡ ವಿಜುಗೌಡ ಪಾಟೀಲ ಈ ಟಿವಿ ಭಾರತಕ್ಕೆ ಮಾಹಿತಿ‌ ನೀಡಿದರು‌.

ABOUT THE AUTHOR

...view details