ಕರ್ನಾಟಕ

karnataka

ETV Bharat / state

ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಗುದ್ದಿದ ಸಾರಿಗೆ ಬಸ್‌.. ಸ್ಥಳದಲ್ಲೇ ಕಂಡಕ್ಟರ್‌ ಮತ್ತು ಡ್ರೈವರ್‌ ದುರ್ಮರಣ.. - Photos and script

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ಲಾರಿ ಮತ್ತು ಬಸ್​ ನಡುವೆ ಅಪಘಾತ ಸಂಭವಿಸಿದ್ದು, ಬಸ್​ ಚಾಲಕ ಹಾಗೂ ನಿರ್ವಾಹಕ ಮೃತಪಟ್ಟಿದ್ದಾರೆ.

ಕೆಟ್ಟು ನಿಂತಿದ್ದ ಲಾರಿಗೆ ಬಸ್​ ಡಿಕ್ಕಿ....ಇಬ್ಬರು ಸಾವು

By

Published : Jun 23, 2019, 11:33 AM IST

Updated : Jun 23, 2019, 12:12 PM IST

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ದಡೇಸುಗೂರು ಹತ್ತಿರದ ಬೂದಿವಾಳ ಕ್ಯಾಂಪ್ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ ಚಾಲಕ ಹಾಗೂ ನಿರ್ವಾಹಕ ಮೃತಪಟ್ಟಿದ್ದಾರೆ.

ಚಾಲಕ ಶಿವನಗೌಡ ಬಾಗಲಕೋಟೆ, ನಿರ್ವಾಹಕ ಚಂದ್ರು ಲಿಂಗಸೂಗೂರು ಮೃತ ದುರ್ದೈವಿಗಳು. ಬೆಂಗಳೂರಿನಿಂದ ರಾಯಚೂರಿಗೆ ಬರುವ ವೇಳೆ ಮಾರ್ಗ ಮಧ್ಯೆ 5ಗಂಟೆ ಸುಮಾರಿಗೆ ಈ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೂ ಗಾಯಗಳಾಗಿವೆ. ಅದರಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನ ಹೆಚ್ಚಿನ‌ ಚಿಕಿತ್ಸೆಗಾಗಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕೆಟ್ಟು ನಿಂತಿದ್ದ ಲಾರಿಗೆ ಬಸ್​ ಡಿಕ್ಕಿ....ಇಬ್ಬರು ಸಾವು

ಕೆಟ್ಟು ಹೋದ ಲಾರಿಯನ್ನ ರಸ್ತೆ ಬದಿ ನಿಲ್ಲಿಸಲಾಗಿತ್ತು. ಆದರೆ, ಹಿಂದಿನಿಂದ ಬಂದ ಬಸ್​ ಲಾರಿಗೆ ಡಿಕ್ಕಿ ಹೊಡೆದಿದ್ದು, ಬಸ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಷ್ಟೇ ಅಲ್ಲ, ಲಾರಿಯಲ್ಲಿದ್ದ ಕಬ್ಬಿಣದ ರಾಡುಗಳು ನಿರ್ವಾಹಕ ಮತ್ತು ಚಾಲಕನ ದೇಹದೊಳಗೆ ಹೊಕ್ಕ ಪರಿಣಾಮ ಅವರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 23, 2019, 12:12 PM IST

For All Latest Updates

ABOUT THE AUTHOR

...view details