ಕರ್ನಾಟಕ

karnataka

ETV Bharat / state

ರಾಯಚೂರು: ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿ.ವಿ.ನಾಯಕ್

ಪಕ್ಷದಲ್ಲಿ ಯಾವುದಾದರೂ ಅಸಮಾಧಾನವಿದ್ದರೆ ಅದನ್ನು ಸರಿದೂಗಿಸಿ, ಮೈತ್ರಿ ಅಭ್ಯರ್ಥಿ‌ಯನ್ನ ಗೆಲಿಸುತ್ತೇವೆ, ಎಂದ ಸಚಿವ ವೆಂಕಟರಾವ್ ನಾಡಗೌಡ.

By

Published : Mar 26, 2019, 4:23 PM IST

ಜೆಡಿಎಸ್-ಕಾಂಗ್ರೆಸ್ ಪಕ್ಷದ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ

ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಪಕ್ಷದ ಉಭಯ ನಾಯಕರ ಜಂಟಿ ಸುದ್ದಿಗೋಷ್ಠಿ

ನಗರದ ಖಾಸಗಿ ಹೊಟೇಲ್ ನಲ್ಲಿ ಜೆಡಿಎಸ್-ಕಾಂಗ್ರೆಸ್ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಕ್ಷೇತ್ರದ ಹಾಲಿ ಸಂಸದ ಬಿ.ವಿ.ನಾಯಕರನ್ನ ಕಣಕ್ಕಿಳಿಸಲಾಗಿದೆ. ಇವರನ್ನ ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಜೆಡಿಎಸ್ ಮಾಡಲಿದೆ. ಪಕ್ಷದಲ್ಲಿ ಯಾವುದಾದರೂ ಅಸಮಾಧಾನವಿದ್ದರೆ ಅದನ್ನು ಸರಿದೂಗಿಸಿ, ಮೈತ್ರಿ ಅಭ್ಯರ್ಥಿ‌ಯನ್ನ ಗೆಲ್ಲಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್, ಶಾಸಕ ಬಸವನಗೌಡ ದದ್ದಲ್, ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ, ಎರಡು ಪಕ್ಷಗಳ ಮುಖಂಡರಾದ ಪಾರಸಮಲ್ ಸುಖಾಣಿ, ಜಯಣ್ಣ, ರುದ್ರಪ್ಪ ಅಂಗಡಿ, ಶರಣಪ್ಪ‌ ಮೇಟಿ, ಶಾಂತಪ್ಪ, ಅಮ್ಜದ್ ಪಾಟೀಲ್ ಸೇರಿದಂತೆ ಇತರರಿದರು.

ABOUT THE AUTHOR

...view details