ಕರ್ನಾಟಕ

karnataka

By

Published : Feb 12, 2020, 7:18 PM IST

ETV Bharat / state

ರಾಯಚೂರು ಜಿಲ್ಲೆಯಲ್ಲಿ ನಾಳೆ ಬಂದ್‌ ಇರಲ್ವಂತೆ..

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್​ನಿಂದ ರಾಯಚೂರು ಜಿಲ್ಲೆಗೆ ಯಾವುದೇ ಎಫೆಕ್ಟ್ ಆಗಲಾರದು ಎಂದು ಹೇಳಲಾಗುತ್ತಿದೆ.

Call for bandh on Sarojini Mahishi Report: No Band effect for Raichur district
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್​ ಕರೆ:ರಾಯಚೂರು ಜಿಲ್ಲೆಗೆ ನೋ ಬಂದ್ ಎಫೆಕ್ಟ್

ರಾಯಚೂರು:ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್​ನಿಂದ ರಾಯಚೂರು ಜಿಲ್ಲೆಗೆ ಯಾವುದೇ ಎಫೆಕ್ಟ್ ಆಗಲಾರದು ಎಂದು ಹೇಳಲಾಗುತ್ತಿದೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್‌ಗೆ ಕರೆ: ರಾಯಚೂರು ಜಿಲ್ಲೆಗೆ ಎಫೆಕ್ಟ್ ಆಗಲ್ವಂತೆ..

ಕನ್ನಡ ಪರ ಸಂಘಟನೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿವೆ. ಆದರೆ, ಜಿಲ್ಲೆಯಲ್ಲಿ ಈವರೆಗೆ ಬಂದ್‌ಗೆ ಸಂಬಂಧಿಸಿದಂತೆ ಯಾವುದೇ ಸಿದ್ಧತೆ ನಡೆದಿಲ್ಲ. ಅಲ್ಲದೇ, ಬಂದ್ ಬೆಂಬಲಿಸುವಂತೆ ಕನ್ನಡ ಪರ ಸಂಘಟನೆಗಳು ಸಹ ಮನವಿ ಸಲ್ಲಿಸಿಲ್ಲ. ಹೀಗಾಗಿ, ನಾಳೆ ಕರೆ ನೀಡಿರುವ ಬಂದ್‌ನಿಂದ ಯಾವುದೇ ಎಫೆಕ್ಟ್ ಆಗುವ ಸಾಧ್ಯತೆ ಕಡಿಮೆ.

ಜಿಲ್ಲಾಡಳಿತದ ಸಹ ಈವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಆದರೆ, ಬಂದ್ ಹಿನ್ನೆಲೆಯಲ್ಲಿ ಕೇವಲ ಸಾಂಕೇತಿಕ ಮನವಿ ಪತ್ರ ಸಲ್ಲಿಸುವ ಸಾಧ್ಯತೆಯಿದೆ.

ABOUT THE AUTHOR

...view details