ರಾಯಚೂರು: ಜಿಲ್ಲೆಯ ಹಡಗಲಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.
ಗಲಾಟೆಯಲ್ಲಿ ಕಾಂಗ್ರೆಸ್ನ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದು, ಅಶೋಕ, ವೆಂಕನಗೌಡ, ಅಂಬರೇಶ್, ತಿಮ್ಮನಗೌಡರ ಎಂಬುವರಿಂದ ಹಲ್ಲೆ ನಡೆದಿದೆ ಎಂದು ದೂರಲಾಗಿದೆ. ಶರಣಬಸವ, ಬಸವರಾಜ ಹಲ್ಲೆಗೊಳಗಾಳದವರಾಗಿದ್ದು, ಮಸ್ಕಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.