ರಾಯಚೂರು: ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಲಾಗಿತ್ತು. ಮೂರು ದಿನಗಳ ಬಳಿಕ ಗಣೇಶ ಮೂರ್ತಿಯನ್ನ ನಿಮಜ್ಜನ ಮಾಡಿ ವಾಪಸ್ ಬರುತ್ತಿರುವ ಗುಂಪು ಮತ್ತು ನಿಮಜ್ಜನಕ್ಕೆ ತೆರಳುತ್ತಿರುವ ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.