ಕರ್ನಾಟಕ

karnataka

ETV Bharat / state

ಶಾಸಕ ಶಿವನಗೌಡ ನಾಯಕ​ ವಿರುದ್ಧ ದೂರು ನೀಡಲಾಗುವುದು: ಜೆಡಿಎಸ್​ ಜಿಲ್ಲಾಧ್ಯಕ್ಷ - undefined

ಸಿಎಂ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ವಿರುದ್ಧ ಆಕ್ರೊಶ ವ್ಯಕ್ತವಾಗಿದೆ.

ದೇವದುರ್ಗ ಶಾಸಕ ಶಿವನಗೌಡ ನಾಯಕ್​ ವಿರುದ್ಧ ಆಯೊಗಕ್ಕೆ ದೂರು

By

Published : Apr 17, 2019, 1:09 PM IST

ರಾಯಚೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಲಾಗುವುದು ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ ಹೇಳಿದ್ದಾರೆ.

ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೀರುಪಾಕ್ಷಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರವಾರದ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ಶಾಸಕರು ಸಿಎಂ ವಿರುದ್ಧ ಮಾತನಾಡುವಾಗ ತಮ್ಮ ನಾಲಿಗೆ ಹರಿಬಿಟ್ಟಿರುವುದನ್ನ ಜೆಡಿಎಸ್‌ ಉಗ್ರವಾಗಿ ಖಂಡಿಸುತ್ತದೆ. ಇದೇ ರೀತಿಯಾಗಿ ತಮ್ಮ ವರ್ತನೆ ಮುಂದುವರಿಸಿದ್ದೇ ಆದ್ರೆ ನಾಲಿಗೆ ಕಟ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಸಿಎಂ ವಿರುದ್ಧ ಮಾತನಾಡಿರುವುದಕ್ಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳುವುದಕ್ಕೆ ಒತ್ತಾಯಿಸಲಾಗುವುದು ಎಂದಿದ್ದಾರೆ.

For All Latest Updates

TAGGED:

ABOUT THE AUTHOR

...view details