ಕರ್ನಾಟಕ

karnataka

By

Published : Mar 29, 2021, 8:30 AM IST

Updated : Mar 29, 2021, 9:16 AM IST

ETV Bharat / state

ಮಸ್ಕಿ ಉಪಚುನಾವಣೆ: ಕೈ - ಕಮಲದ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

ಮಸ್ಕಿ ಉಪ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರತಾಪ್ ಗೌಡ ಪಾಟೀಲ್ ಮತ್ತು ಬಸನಗೌಡ ತುರುವಿಹಾಳ ನಾಮಪತ್ರ ಸಲ್ಲಿಸಲಿದ್ದಾರೆ.

ಮಸ್ಕಿ ಉಪಚುನಾವಣೆ
ಮಸ್ಕಿ ಉಪಚುನಾವಣೆ

ರಾಯಚೂರು: ಮಸ್ಕಿ ಉಪ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ - ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು ಇಂದು ಸಚಿವ ಶ್ರೀರಾಮುಲು, ವಿಜಯೇಂದ್ರ ಸೇರಿದಂತೆ ಇತರ ನಾಯಕರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ‌ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ‌ ನಾಮಪತ್ರ ಸಲ್ಲಿಕೆಗೂ ಮೊದಲು ಪಟ್ಟಣದಲ್ಲಿ ರ‍್ಯಾಲಿ ಹಾಗೂ ಕಾರ್ಯಕರ್ತರ ಬಹಿರಂಗ ಸಭೆ ನಡೆಸಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ತುರುವಿಹಾಳ ನಾಮಪತ್ರ ಸಲ್ಲಿಸಲಿದ್ದಾರೆ.

Last Updated : Mar 29, 2021, 9:16 AM IST

ABOUT THE AUTHOR

...view details