ಕರ್ನಾಟಕ

karnataka

By

Published : Jan 1, 2021, 4:54 PM IST

ETV Bharat / state

ವಿಧಾನಸಭೆ ಚುನಾವಣೆಗೂ ಮುನ್ನವೇ ಲಿಂಗಸುಗೂರು ಕಾಂಗ್ರೆಸ್​ ಮುಕ್ತ; ಮಾನಪ್ಪ ವಜ್ಜಲ

ಮುಂಬರುವ ಜಿಲ್ಲಾ ಪಂಚಾಯತ್​ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್​ನ ಶೇ 50 ರಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ. ವಿಧಾನಸಭೆ ಚುನಾವಣೆ ಬರುವಷ್ಟರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮವಾಗಲಿದೆ ಎಂದು ಮಾನಪ್ಪ ವಜ್ಜಲ ಲಿಂಗಸುಗೂರಿನಲ್ಲಿ ಹೇಳಿದ್ದಾರೆ.

Congress leaders joined BJP in Lingasuguru
ಲಿಂಗಸುಗೂರು ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಲಿಂಗಸುಗೂರು : ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಮುಕ್ತ ಲಿಂಗಸುಗೂರು ನಿಶ್ಚಿತ ಎಂದು ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಮಾನಪ್ಪ ವಜ್ಜಲ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಶಂಕರಗೌಡ ಬಳಗಾನೂರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡವರನ್ನು ಸ್ವಾಗತಿಸಿ ಮಾತನಾಡಿದ ಅವರು, ಇದು ಗ್ರಾಮ ಪಂಚಾಯತ್​ ಚುನಾವಣೆ ನಂತರದ ಹೊಸ ವರ್ಷದ ಕೊಡುಗೆಯಾಗಿದೆ. ಮುಂಬರುವ ಜಿಲ್ಲಾ ಪಂಚಾಯತ್​ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್​ನ ಶೇ 50 ರಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ. ವಿಧಾನಸಭೆ ಚುನಾವಣೆ ಬರುವಷ್ಟರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮವಾಗಲಿದೆ ಎಂದರು.

ಹಟ್ಟಿ ಚಿನ್ನದ ಗಣಿ ಆಡಳಿತ ಮಂಡಳಿ ಅಧ್ಯಕ್ಷ ಮಾನಪ್ಪ ವಜ್ಜಲ

ಓದಿ : ಚುನಾವಣೆ ಕದನ ಮುಗಿದರೂ ಹಳ್ಳಿಗರ ಫೈಟ್​ ನಿಂತಿಲ್ಲ : ಸೋತವರು-ಗೆದ್ದವರ ಮಧ್ಯೆ ಮಾರಾಮಾರಿ

ಈಗಾಗಲೇ ಶೇ 80ರಷ್ಟು ಕಾಂಗ್ರೆಸ್ ಮುಖಂಡರು ಪರೋಕ್ಷವಾಗಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ನಾವೇ ಕಾದು ನೋಡೋಣ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಜೆಡಿಎಸ್ ಈಗಾಗಲೇ ತೆರೆಮರೆಗೆ ಸರಿದು ಹೋಗಿದೆ. ಕ್ಷೇತ್ರದಲ್ಲಿ ನಾವು 20 ಕ್ಕೂ ಹೆಚ್ಚು ಗ್ರಾಮ ಪಂಚಾಯತ್​ಗಳ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details