ಕರ್ನಾಟಕ

karnataka

ETV Bharat / state

ಕ್ವಾರಂಟೈನ್ ಕೇಂದ್ರದಲ್ಲಿ ಸಮಯ ಕಳೆಯಲು ಕೇರಂ, ಚೆಸ್​ ಮೊರೆ ಹೋದ ಸೋಂಕಿತರು

ರಾಯಚೂರು ಮಾನ್ವಿ ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿರುವ ಕೊರೊನಾ ಸೋಂಕಿತರು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಿವಿಧ ಆಟಗಳನ್ನು ಆಡುವ ಮೂಲಕ ಸಮಯ ಕಳೆಯುತ್ತಿದ್ದಾರೆ.

By

Published : Jul 20, 2020, 10:36 AM IST

Corona Infected Spending time by Playing
ಚೆಸ್​, ಕೇರಂ ಮೊರೆ ಹೋದ ಸೋಂಕಿತರು

ರಾಯಚೂರು: ಕ್ವಾರಂಟೈನ್​ ಕೇಂದ್ರದಲ್ಲಿರುವ ಕೊರೊನಾ ಸೋಂಕಿತರು ಚೆಸ್​, ಕೇರಂ ಆಡುವ ಮೂಲಕ ಸಮಯ ಕಳೆಯುತ್ತಿದ್ದಾರೆ.

ಜಿಲ್ಲೆಯ ಮಾನ್ವಿ ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿರುವ ಸೋಂಕಿತರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಮುಂಜಾಗ್ರತೆಯೊಂದಿಗೆ ಕೇರಂ, ಚೇಸ್ ಆಡುವ ಮೂಲಕ ಸಮಯ ಕಳೆಯಲು ಅವಕಾಶ ಮಾಡಿಕೊಡಲಾಗಿದೆ.

ಕ್ವಾರಂಟೈನ್ ಕೇಂದ್ರದಲ್ಲಿ ಆಟವಾಡುತ್ತಿರುವ ಮಕ್ಕಳು

ಇದರ ಜೊತೆಗೆ ಕ್ವಾರಂಟೈನ್​ ಕೇಂದ್ರದಲ್ಲಿರುವ ಸೋಂಕಿತ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ನೀಡುವಂತೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನಕ್ಕೆ ಕೋರಲಾಗಿತ್ತು. ಅದರಂತೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 50 ಆಟಿಕೆ ಸಾಮಗ್ರಿಗಳನ್ನು ಒದಗಿಸಿದೆ. ಮಕ್ಕಳಿಗೂ ಕೂಡ ಮುನ್ನೆಚ್ಚರಿಕೆಯೊಂದಿಗೆ ಆಡವಾಡಲು ಅವಕಾಶ ಕಲ್ಪಿಸಲಾಗಿದೆ.

ABOUT THE AUTHOR

...view details