ಕರ್ನಾಟಕ

karnataka

ETV Bharat / state

ರಾಯಚೂರು: ನಿರ್ಜನ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆ.. ಕೊಲೆ ಶಂಕೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಬಳಗಾನೂರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By

Published : Aug 8, 2023, 6:44 PM IST

ನಿರ್ಜನ ಪ್ರದೇಶದಲ್ಲಿ ಮಹಿಳೆ ಶವಪತ್ತೆ
ನಿರ್ಜನ ಪ್ರದೇಶದಲ್ಲಿ ಮಹಿಳೆ ಶವಪತ್ತೆ

ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಜವಳಗೇರಾ ಗ್ರಾಮದ ಹತ್ತಿರ ಜಾನೇಕಲ್ ಎನ್ನುವವರ ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದೆ. ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ನಿನ್ನೆ ತಡರಾತ್ರಿ ವೇಳೆ ಈ‌ ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಬಳಗಾನೂರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು, ಶ್ವಾನ ದಳದಿಂದ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.

ಮಹಿಳೆಯ ಮುಖ, ಗುರುತು ಪತ್ತೆಯಾಗದಂತೆ ಯಾವ ಕೆಮಿಕಲ್ ಬಳಸಿರಬಹುದು ಅಥವಾ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಮಹಿಳೆಯ ಗುರುತು ಪತ್ತೆಯಾಗಿಲ್ಲ‌. ಘಟನಾ ಸ್ಥಳಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಬಾಲಕಿ ಶವ ಪತ್ತೆ:ಇನ್ನೊಂದೆಡೆ ಬಾಲಕಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ರಾಯಚೂರು ತಾಲೂಕಿನಲ್ಲಿ (ಜುಲೈ 14-2023) ನಡೆದಿತ್ತು. ಬೇವಿನ ಮರದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಘಟನೆಗೆ ಕಾರಣ ತಿಳಿದು ಬಂದಿರಲಿಲ್ಲ. ವಿಷಯ ತಿಳಿದ ಇಡಪನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ರಾಯಚೂರಿನ ರಿಮ್ಸ್‌ನ ಆಸ್ಪತ್ರೆಗೆ ರವಾನಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಬಾಲಕಿಯ ಪೋಷಕರು, ''ನಾವು ವ್ಯಾಪಾರಕ್ಕೆ ಹೋಗಿದ್ದ ವೇಳೆ ನಮ್ಮ ಮಗಳನ್ನು ಮೂವರು ಯುವಕರು ಅತ್ಯಾಚಾರ ಮಾಡಿ, ಮರಕ್ಕೆ ನೇಣು ಹಾಕಿದ್ದಾರೆ'' ಎಂದು ಆರೋಪಿಸಿದ್ದರು.

ಇದನ್ನೂ ಓದಿ:ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ABOUT THE AUTHOR

...view details