ರಾಯಚೂರು: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
ಜಿಲ್ಲೆಯ ಮಾನ್ವಿ ಪಟ್ಟಣದ ಹೊರವಲಯದ ಮಲ್ಲಿಕಾರ್ಜುನ ಗುಡ್ಡದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅಮರೇಶ್ವರ ಕ್ಯಾಂಪ್ನ ನಿವಾಸಿ ಯಲ್ಲಪ್ಪ(33) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ.
ರಾಯಚೂರು: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
ಜಿಲ್ಲೆಯ ಮಾನ್ವಿ ಪಟ್ಟಣದ ಹೊರವಲಯದ ಮಲ್ಲಿಕಾರ್ಜುನ ಗುಡ್ಡದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಅಮರೇಶ್ವರ ಕ್ಯಾಂಪ್ನ ನಿವಾಸಿ ಯಲ್ಲಪ್ಪ(33) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಸ್ಥಳದಲ್ಲಿ ಮದ್ಯಪಾನ, ಊಟ ಮಾಡಿದ ಪತ್ರೋಳಿ ಬಿದ್ದಿದೆ. ಈ ಸ್ಥಳಕ್ಕೆ ತೆರಳಲು ಒಬ್ಬಂಟಿಯಾಗಿ ತೆರಳಿದ್ದನೋ ಅಥವಾ ಸ್ನೇಹಿತರೊಡನೆ ತೆರಳಿದ್ದಾನೋ ಎಂಬ ಮಾಹಿತಿ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಪೊಲೀಸ್ ತನಿಖೆ ನಂತರ ಕಾರಣ ತಿಳಿದು ಬರಲಿದೆ. ಅಲ್ಲದೇ ಯಲ್ಲಪ್ಪನ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.