ರಾಯಚೂರು:ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮರಳನ್ನ ಪೊಲೀಸರು ಜಪ್ತಿ ಮಾಡಿರುವ ಘಟನೆ ದೇವದುರ್ಗದಲ್ಲಿ ನಡೆದಿದೆ.
ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ... 1400 ಮೆಟ್ರಿಕ್ ಟನ್ ಮರಳು ವಶಕ್ಕೆ
ದೇವದುರ್ಗ ತಾಲೂಕಿನ ಅಂಚೆಸೂಗೂರು ಗ್ರಾಮದ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆ ಮೇಲೆ ದಾಳಿ ನಡೆಸಿ, 1400 ಮೆಟ್ರಿಕ್ ಟನ್ ಮರಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ....1400 ಮೆಟ್ರಿಕ್ ಟನ್ ಮರಳು ವಶ!
ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೆಸೂಗೂರು ಗ್ರಾಮದ ಬಳಿ 1400 ಮೆಟ್ರಿಕ್ ಟನ್ ಮರಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಕೃಷ್ಣ ನದಿಯಲ್ಲಿ ಯಥೇಚ್ಛವಾಗಿ ಮರಳು ದೊರೆಯುತ್ತಿದ್ದು, ಅಕ್ರಮ ಮರಳುಗಾರಿಕೆ ನಡೆಯುತ್ತಲೇ ಇರುತ್ತದೆ. ಇಂದು ಅಂಚೆಸೂಗೂರು ಗ್ರಾಮದಲ್ಲಿ ಮರಳು ಸಂಗ್ರಹಿಸಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.