ಕರ್ನಾಟಕ

karnataka

By

Published : Jun 24, 2020, 5:19 PM IST

ETV Bharat / state

ರಾಯಚೂರು: ನಾಳೆಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಜಿಲ್ಲೆಯಾದ್ಯಂತ ಒಟ್ಟು 77 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚುವರಿ 9 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 1,483 ಕೊಠಡಿಗಳನ್ನು ಪರೀಕ್ಷೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಡಿಡಿಪಿಐ ಬಿ.ಹೆಚ್​​ ಗೋನಾಳ ಮಾಹಿತಿ ನೀಡಿದ್ದಾರೆ.

Everything was ready for Tomorrow's sslc examination in raichur districts
ರಾಯಚೂರು: ನಾಳೆಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಕಲ ಸಿದ್ಧತೆ

ರಾಯಚೂರು: ನಾಳೆ ನಡೆಯುವ ಎಸ್​​​ಎಸ್​​ಎಲ್​​​ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 30,413 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಹೆಚ್​​​.ಗೋನಾಳ ತಿಳಿಸಿದ್ದಾರೆ.

ರಾಯಚೂರು: ನಾಳೆಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಇದಕ್ಕಾಗಿ ಜಿಲ್ಲೆಯಾದ್ಯಂತೆ ಒಟ್ಟು 77 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚುವರಿ 9 ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 1,483 ಕೊಠಡಿಗಳನ್ನು ಬಳಸಿಕೊಳ್ಳಲಾಗಿದೆ ಎಂದರು.

ಪರೀಕ್ಷೆ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಅಂಗವಾಗಿ ಥರ್ಮಲ್ ಸ್ಕ್ಯಾನ್ ಕೂಡ ಮಾಡಲಾಗುವುದು ಎಂದರು.

ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲ ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್​ ಮಾಡುವ ಮೂಲಕ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದಿದ್ದಾರೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸಹ ಉಚಿತ ಮಾಸ್ಕ್ ನೀಡಲಾಗುವುದು, ಇನ್ನೂ ನಾಳೆ ಪರೀಕ್ಷೆ ನಡೆಯುವ ಹಿನ್ನೆಲೆ ಪೂರ್ವಭಾವಿಯಾಗಿ ಇಂದು ಯರಮರಸ್​​​​ನ ಆದರ್ಶ ವಿದ್ಯಾಲಯದಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತೋರಿಸಲಾಯಿತು.

ಪೊಷಕರು ಧೈರ್ಯದಿಂದ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಬೇಕು. ಅವರ ಆರೋಗ್ಯ ದೃಷ್ಠಿಯಿಂದ ಎಲ್ಲ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details