ಕರ್ನಾಟಕ

karnataka

ETV Bharat / state

ನೆರೆ ಪರಿಹಾರ ಚರ್ಚೆ... ಒಬ್ಬೊಬ್ಬರಾಗಿ ಕೇಂದ್ರದ ವಿರುದ್ಧ ತಿರುಗಿ ಬೀಳ್ತಿದ್ದಾರೆ ಬಿಜೆಪಿ ಸಂಸದರು - Flood relief fund

ಕೇಂದ್ರ ಸರ್ಕಾರದಿಂದ ನೆರೆ ಪರಿಹಾರಕ್ಕೆಂದು ಇದೂವರೆಗೂ ಬಿಡಿಗಾಸು ದೊರೆಯದ ಹಿನ್ನೆಲೆ ಒಬ್ಬಬ್ಬರಾಗಿ ಅಸಮಧಾನ ಹೊರಹಾಕುತ್ತಿದ್ದು, ಈಗ ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ ಸಹ ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಾ ಅಮರೇಶ್ವರ ನಾಯಕ

By

Published : Oct 4, 2019, 5:04 PM IST

ರಾಯಚೂರು:ಕೇಂದ್ರ ಸರಕಾರ ನೆರೆ ಪರಿಹಾರ ಬಿಡುಗಡೆ ಮಾಡುವುದಕ್ಕೆ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನವಿದೆ ಎಂದು ರಾಯಚೂರು ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ ಸ್ವ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ಸರಕಾರವಿರಲಿ ಪರಿಹಾರವನ್ನ ತುರ್ತು ವಿತರಣೆ ಮಾಡಬೇಕು ಹೊರತು ವಿಳಂಬ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರ ನೆರೆ ಪರಿಹಾರ ವಿಳಂಬ ಮಾಡುತ್ತಿರುವುದಕ್ಕೆ ನನಗೆ ಬೇಸರವಿದೆ ಎಂದು ತಮ್ಮದೆ ಸರಕಾರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ರಾಜಾ ಅಮರೇಶ್ವರ ನಾಯಕ

ಪರಿಹಾರ ಪ್ರಸ್ತಾವನೆ ಸಲ್ಲಿಸುವ ವೇಳೆ ಅಧಿಕಾರಿಗಳು ಸಮರ್ಪಕವಾದ ಪ್ರಸ್ತಾವನೆ ಸಲ್ಲಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳ ತಪ್ಪಿನಿಂದ ಅನುದಾನ ಬರುವುದಕ್ಕೆ ವಿಳಂಬವಾಗುತ್ತದೆ ಹಾಗೂ ಎರಡು ಸರ್ಕಾರದ ನಡುವೆ ವೈಮನಸ್ಸು ಉಂಟಾಗುತ್ತದೆ ಎಂದರು. ನೆರೆಯ ವಿಚಾರಕ್ಕೆ ಯಾವುದಾದರೂ ಅನುದಾನವನ್ನು ಕಡಿತ ಮಾಡಿ ಮೊದಲು ನೆರೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.‌.

ABOUT THE AUTHOR

...view details