ರಾಯಚೂರು: ಇತಿಹಾಸ ಪ್ರಸಿದ್ದ ರಾಯಚೂರು ಜಿಲ್ಲೆಯ ಮಲ್ಲಿಕಾರ್ಜುನ ಬೆಟ್ಟದ ನಿಷೇಧಿತ ಪ್ರದೇಶದಲ್ಲಿ ಅಕ್ರಮ ರಸ್ತೆ ನಿರ್ಮಾಣ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನವಿರುವ ಶಾಸನದ ಪಕ್ಕದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಒಂದು ಕಿಲೋಮೀಟರ್ವರೆಗೆ ರಸ್ತೆ ನಿರ್ಮಾಣ ಮಾಡುವ ಮೂಲಕ ವಿಶ್ವವಿಖ್ಯಾತಿಯ ಬೆಟ್ಟಕ್ಕೆ ದುಷ್ಕರ್ಮಿಗಳು ಕನ್ನ ಹಾಕುವ ಯತ್ನ ನಡೆಸಿದ್ದಾರೆ. ಇಲ್ಲಿ ಅಶೋಕ ಚಕ್ರವರ್ತಿ ದೇವನಂ ಪ್ರಿಯ ಎನ್ನುವ ಅಶೋಕ ಶಾಸನವಿದ್ದು, ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಗೆ ಬರುವ ಬೆಟ್ಟದಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೆ ಅವಕಾಶವಿಲ್ಲ. ಒಂದು ವೇಳೆ ಯಾವುದೇ ಚಟುವಟಿಕೆ ನಡೆಸಿದ್ರೆ ಕಾನೂನು ಬಾಹಿರವಾಗುತ್ತದೆ.