ಕರ್ನಾಟಕ

karnataka

ETV Bharat / state

ಬದಲಾದ ತೀರ್ಮಾನ: ಮಸ್ಕಿ ಉಪಚುನಾವಣೆಗೆ ಜೆಡಿಎಸ್ ಸ್ಪರ್ಧೆ? - Raichur

ಇಷ್ಟು ದಿನಗಳ ಕಾಲ ಸೈಲೆಂಟ್​ ಆಗಿದ್ದ ಜೆಡಿಎಸ್ ಇದೀಗ ಮಸ್ಕಿ ಬೈ ಎಲೆಕ್ಷನ್​ನಲ್ಲಿ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ. ಇದರಿಂದ ಉಪಕದನ ಮತ್ತಷ್ಟು ರಂಗು ಪಡೆಯುವ ಸಾಧ್ಯತೆಯಿದೆ.

Raichur
ಬದಲಾದ ತೀರ್ಮಾನ: ಮಸ್ಕಿ ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ..

By

Published : Feb 18, 2021, 7:30 PM IST

ರಾಯಚೂರು:ಶಾಸಕ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾದ ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿವೆ. ಇತ್ತ ಜೆಡಿಎಸ್ ತಟಸ್ಥ ನೀತಿ ಅನುಸರಿಸಿ ಮಸ್ಕಿ ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಮುಖಂಡರು ಸ್ಪಷ್ಟನೆ ನೀಡಿದ್ದರು. ಆದ್ರೆ ಇದೀಗ ಜೆಡಿಎಸ್ ತೀರ್ಮಾನ ಬದಲಾಗಿದ್ದು, ಮಸ್ಕಿ ಉಪಚುನಾವಣೆಗೆ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದ್ದಾರೆ ಎನ್ನಲಾಗ್ತಿದೆ.

ಬದಲಾದ ತೀರ್ಮಾನ: ಮಸ್ಕಿ ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ..

ಆಪರೇಷನ್ ಕಮಲಕ್ಕೆ ಒಳಗಾಗಿ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದೆ. ಇದಕ್ಕಾಗಿ ಬಿಜೆಪಿಯಿಂದ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಬಿಜೆಪಿ ತೊರೆದಿರುವ ಬಸವನಗೌಡ ತುರುವಿಹಾಳ ಕಾಂಗ್ರೆಸ್​ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳಿವೆ. ಹೀಗಾಗಿ ಮಸ್ಕಿ ಉಪ ಕದನದಲ್ಲಿ ಬಿಜೆಪಿ ವರ್ಸಸ್​ ಕಾಂಗ್ರೆಸ್ ಆಗಲಿದೆ ಎನ್ನುವ ರಾಜಕೀಯ ಲೆಕ್ಕಾಚಾರವಾಗಿತ್ತು. ಆದ್ರೆ ಇಷ್ಟು ದಿನಗಳ ಕಾಲ ಸೈಲೆಂಟ್​ ಆಗಿದ್ದ ಜೆಡಿಎಸ್ ಇದೀಗ ಮಸ್ಕಿ ಬೈ ಎಲೆಕ್ಷನ್​ನಲ್ಲಿ ಅಭ್ಯರ್ಥಿಯನ್ನ ಕಣಕ್ಕಿಳಿಸಲಿದೆ. ಇದರಿಂದ ಉಪಕದನ ಮತ್ತಷ್ಟು ರಂಗು ಪಡೆಯುವ ಸಾಧ್ಯತೆಯಿದೆ.

ಹಣವಿಲ್ಲ ಅಂದಿದ್ದರು ದೇವೇಗೌಡರು!

ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭೆ, ಮಸ್ಕಿ ಉಪಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಹೀಗಾಗಿ ಎಲ್ಲಿಯೂ ಅಭ್ಯರ್ಥಿಗಳನ್ನ ನಿಲ್ಲಿಸುವುದಿಲ್ಲ. ಅಲ್ಲದೇ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ ಈ ಬಗ್ಗೆ ಹೇಳಿದ್ದು, ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ರಾಯಚೂರಿನಲ್ಲಿ ಹೇಳಿದ್ದರು.

ಓದಿ:ಮುಂದಿನ ವಿಧಾನಸಭೆ, ಲೋಕಸಭೆ ಉಪಚುನಾವಣೆಗೆ ಜೆಡಿಎಸ್​ನಿಂದ ಅಭ್ಯರ್ಥಿಗಳನ್ನ ಕಣಕ್ಕಿಳಿಸಲ್ಲ: ಹೆಚ್​ಡಿಡಿ

ಆದ್ರೆ ಜೆಡಿಎಸ್ ಜಿಲ್ಲಾಧ್ಯಕ್ಷರು, ಪಕ್ಷದ ರಾಜ್ಯಾಧ್ಯಕ್ಷರು, ಅಭ್ಯರ್ಥಿಗಳು ತೀರ್ಮಾನಿಸಿದ್ದು, ಅದರಂತೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಇದರಿಂದ ಮಸ್ಕಿ ಬೈ ಎಲೆಕ್ಷನ್​ಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಒಂದೆಡೆಯಾದ್ರೆ, ಹೆಚ್.ಡಿ. ದೇವಗೌಡರು ಬೈ ಎಲೆಕ್ಷನ್​ಗೆ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲ ಅಂದ ಬಳಿಕ ಮತ್ತೆ ಸ್ಪರ್ಧಿಸುತ್ತಾರೆ ಎನ್ನುವ ಹೇಳಿಕೆ ಪಕ್ಷದ ನಾಯಕರಲ್ಲಿ ಗೊಂದಲವಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ತ್ರಿಕೋನ ಸ್ಪರ್ಧೆ?

ಕಳೆದ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಸ್ಕಿ ಬೈ ಎಲೆಕ್ಷನ್​ನಲ್ಲಿ ರಾಜಾಸೋಮನಾಥ ನಾಯಕ ಸ್ಪರ್ಧೆ ಮಾಡಿದ್ರು. ಇದೀಗ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಬೇಕಾದ್ರೆ, ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಬಲಾಢ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗಿದೆ. ಜಿಲ್ಲೆಯಲ್ಲಿ ಜೆಡಿಎಸ್ ಇಬ್ಬರು ಶಾಸಕರು ಇರುವುದರಿಂದ ಕೈ, ಕಮಲಕ್ಕೆ ಪೈಪೋಟಿ ನೀಡುವ ಅಭ್ಯರ್ಥಿಯನ್ನ ಜೆಡಿಎಸ್ ಕಣಕ್ಕಿಳಿಸಿದರೆ ತ್ರಿಕೋನ ಸ್ಪರ್ಧೆ ನಡೆಯುವುದು ನಿಶ್ಚಿತ ಎನ್ನಲಾಗಿದೆ.

ABOUT THE AUTHOR

...view details