ರಾಯಚೂರು:ವಿಧಾನ ಮಂಡಲ ಕಲಾಪಗಳಿಗೆ ವಿದ್ಯುನ್ಮಾನ ಟಿವಿ ಮಾಧ್ಯಮಗಳಿಗೆ ನಿರ್ಬಂಧಿಸಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಪತ್ರಕರ್ತರು ಸ್ಪೀಕರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಮಹತ್ವದ ಸ್ಥಾನವನ್ನು ಹೊಂದಿವೆ. ಜನಸಾಮಾನ್ಯರ ಆಶೋತ್ತರಗಳನ್ನು ನಾಡಿನ ಸರ್ವಾಂಗೀಣ ಅಭಿವೃದ್ಧಿ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ವಿಧಾನ ಮಂಡಲ ಕಲಾಪಗಳನ್ನು ಟಿವಿ ಮಾಧ್ಯಮಗಳು ಪ್ರಸಾರ ಮಾಡುವುದಕ್ಕೆ ಅವಕಾಶ ಕಲ್ಪಿಸುವುದು ಸರಿಯಾದ ಕ್ರಮ. ಇದರಿಂದ ಕಲಾಪಗಳು ಇನ್ನಷ್ಟು ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಯಲು ಸಾಧ್ಯವಾಗುತ್ತದೆ.