ಕರ್ನಾಟಕ

karnataka

ETV Bharat / state

ಇತಿಹಾಸ ಪ್ರಸಿದ್ದ ಕಲ್ಮಲಾ ಕರಿಯಪ್ಪ ತಾತಾ ಜಾತ್ರಾ ಮಹೋತ್ಸವ ರದ್ದು - Kalmala Srikariyappa Tata Jatra

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸದ ನಿಯಂತ್ರಣಕ್ಕೆ ಮುಂದಾದ ಸರ್ಕಾರ ಇದೀಗ ಇತಿಹಾಸ ಪ್ರಸಿದ್ಧ ಕಲ್ಮಲಾ ಶ್ರೀಕರಿಯಪ್ಪ ತಾತಾ ಜಾತ್ರಾ ಮಹೋತ್ಸವ ರದ್ದುಗೊಳಿಸಿದೆ.

Kariyappa's Tatra Jatra Celebration
ಕಲ್ಮಲಾ ಕರಿಯಪ್ಪ ತಾತಾ

By

Published : Jul 14, 2020, 12:05 PM IST

ರಾಯಚೂರು:ಜಿಲ್ಲೆಯಲ್ಲಿಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ಇತಿಹಾಸ ಪ್ರಸಿದ್ಧ ಕಲ್ಮಲಾ ಶ್ರೀಕರಿಯಪ್ಪ ತಾತಾ ಜಾತ್ರಾ ಮಹೋತ್ಸವವನ್ನು ಸರ್ಕಾರ ರದ್ದುಗೊಳಿಸಿದೆ.

ಹೀಗಾಗಿ ಜು. 24 ರಿಂದ 25 ರವರೆಗೆ ನಡೆಯಬೇಕಾದ ಜಾತ್ರಾ ಮಹೋತ್ಸವ ರದ್ದುಗೊಳಿಸಿ ದೇವಸ್ಥಾನದ ಆಡಳಿತ ಮಂಡಳಿ, ಆಡಳಿತಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಕಲ್ಮಲಾ ಕರಿಯಪ್ಪ ತಾತನ ಜಾತ್ರಾ ಮಹೋತ್ಸವ ರದ್ದು
ಶ್ರಾವಣ ಮಾಸದ ಮೊದಲ ಸೋಮವಾರದಂದು ಶ್ರೀಕರಿಯಪ್ಪ ತಾತಾ ಜಾತ್ರೆಯನ್ನ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಇದಕ್ಕಾಗಿ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೇ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ ಇಲಾಖೆಗೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿತ್ತು.

ಆದ್ರೆ ಕೋವಿಡ್-19 ಸಾಂಕ್ರಾಮಿಕ ರೋಗದ ಹತೋಟಿ ತರುವುದಕ್ಕೆ ಜಾತ್ರೆಯನ್ನ ರದ್ದುಗೊಳಿಸಲಾಗಿದ್ದು, ಭಕ್ತರು ಸಹಕರಿಸಬೇಕಾಗಿ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ABOUT THE AUTHOR

...view details