ಕರ್ನಾಟಕ

karnataka

ETV Bharat / state

ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಾಳೆ ಸಿಂಧನೂರಿನಲ್ಲಿ ಬೃಹತ್​ ಸಮಾವೇಶ - ರಾಯಚೂರಿನಲ್ಲಿ ಕುರುಬ ಸಮುದಾಯ ಬೃಹತ್​ ಸಮಾವೇಶ

ಸಮಾವೇಶದಲ್ಲಿ ಪಕ್ಷಾತೀತವಾಗಿ ಸಮಾಜದ ರಾಜಕೀಯ ಮುಖಂಡರು ಸೇರಿದಂತೆ ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ..

Kuruba community
ರಾಯಚೂರು

By

Published : Jan 3, 2021, 11:09 AM IST

ರಾಯಚೂರು :ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಸಿಂಧನೂರಿನಲ್ಲಿ ಕಲಬುರಗಿ ವಿಭಾಗ ಮಟ್ಟದ ಬೃಹತ್ ಸಮಾವೇಶ ನಾಳೆ ನಡೆಯಲಿದೆ.

ಜಿಲ್ಲೆಯ ಸಿಂಧನೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕುರುಬ ಸಮುದಾಯದಿಂದ ಸಮಾವೇಶವನ್ನ ಆಯೋಜಿಸಲಾಗಿದೆ. ಇದಕ್ಕಾಗಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಒದಗಿಸಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ.

ಕುರುಬ ಸಮುದಾಯ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಆದ್ರೆ, ಈವರೆಗೆ ಸರ್ಕಾರ ಮೀಸಲಾತಿ ಕಲ್ಪಿಸಿಲ್ಲ. ಹೀಗಾಗಿ ಸರ್ಕಾರ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಮೂಲಕ ಸರ್ಕಾರವನ್ನ ಒತ್ತಾಯಿಸಲಾಗುವುದು.

ಸಮಾವೇಶದಲ್ಲಿ ಪಕ್ಷಾತೀತವಾಗಿ ಸಮಾಜದ ರಾಜಕೀಯ ಮುಖಂಡರು ಸೇರಿದಂತೆ ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ABOUT THE AUTHOR

...view details