ಕರ್ನಾಟಕ

karnataka

ETV Bharat / state

ತೀವ್ರಗೊಂಡ ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣ ಹೋರಾಟ: ಪರಿಸ್ಥಿತಿ ನಿಭಾಯಿಸಲು ಲಘು ಲಾಠಿ ಪ್ರಹಾರ

ಎಂಜಿನಿಯರಿಂಗ್​ ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣ ಹೋರಾಟ ತೀವ್ರಗೊಂಡಿದೆ. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪರಿಸ್ಥಿತಿಯನ್ನ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

By

Published : Apr 25, 2019, 7:50 PM IST

Updated : Apr 25, 2019, 11:03 PM IST

ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪರಿಸ್ಥಿತಿ ನಿಭಾಹಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು

ರಾಯಚೂರು:ದೇಶವನ್ನೇ ತಲ್ಲಣಗೊಳಿಸಿದ ರಾಯಚೂರು ಎಂಜಿಯರಿಂಗ್​ ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಚಪ್ಪಲಿ, ನೀರಿನ ಬಾಟಲಿ​, ಪ್ಯಾಕೆಟ್​, ಕಲ್ಲು ತೂರಾಟ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು. ಪರಿಸ್ಥಿತಿಯನ್ನ ನಿಭಾಹಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಸ್ಯಾಂಡಲ್​ವುಡ್​ ನಟ-ನಟಿಯರು

ವಿಶ್ವಕರ್ಮ ಸಮಾಜ, ಪ್ರಗತಿಪರ ಸಂಘಟನೆ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಸ್ಯಾಂಡಲ್​ವುಡ್​ ನಟ-ನಟಿಯರು ಜಸ್ಟಿಸ್​ ಫಾರ್​ ಎಂಜಿಯರಿಂಗ್ ಸ್ಟುಡೆಂಟ್​ ಎಂಬ ಅಭಿಯಾನ ಆರಂಭಿಸಿದ್ದು ಇಂದು ನಗರದ ಮಾಣಿಕ್ಯ ಪ್ರಭು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಗೆ ಮಾರ್ಗ ಮಧ್ಯ ಮಾರುತಿ ಬಡಿಗೇರ್ ಎಂಬಾತ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಅಸ್ವಸ್ಥಗೊಂಡನು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಬಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂಡರು. ಜಿಲ್ಲಾಧಿಕಾರಿ ಕಚೇರಿಯೊಳಗೆ ತೆರಳುತ್ತಿದ್ದಾಗ ಇವರನ್ನು ತಡದ ಪೊಲೀಸರ ಕ್ರಮ ಖಂಡಿಸಿ ನೀರು ಮತ್ತು ಬಾಟೇಲ್​​ಗಳು, ಚಪ್ಪಲಿ ತೂರಾಟ ನಡೆಸಿದರು. ಇನ್ನು ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ಸಹ ನಡೆಸಿದರು. ಈ ವೇಳೆ ಪರಿಸ್ಥಿತಿಯನ್ನ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ವಿದ್ಯಾರ್ಥಿಗಳು

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಆಗಮಿಸಿದ ವೇಳೆ ಸಹ ಚಪ್ಪಲಿ​ ಮತ್ತು ನೀರಿನ ಬಾಟಲ್ ಎಸೆದರು. ಈ ವೇಳೆ ಚಪ್ಪಲಿ ಎಸೆದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದರು. ಪರಿಸ್ಥಿತಿ ಮನಗೊಂಡ ಜಿಲ್ಲಾಧಿಕಾರಿ ಶರತ್ ಬಿ. ಘಟನೆಯನ್ನ ಜಿಲ್ಲಾಡಳಿತ ಸಹ ತೀವ್ರವಾಗಿ ಖಂಡಿಸುತ್ತಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ವಿದ್ಯಾರ್ಥಿಗಳ ಮನವಿ ಸ್ವೀಕರಿಸುತ್ತಾ ಹೋರಾಟ ತೀವ್ರತೆಯನ್ನು ಸ್ವಲ್ಪ ಶಮನಗೊಳಿಸಲು ಪ್ರಯತ್ನಪಟ್ಟರು.

ಲಘು ಲಾಠಿ ಪ್ರಹಾರದಲ್ಲಿ ಗಾಯಗೊಂಡ ವಿದ್ಯಾರ್ಥಿ

ಇದೇ ವೇಳೆ ಮಾತನಾಡಿದ ಮೃತ ವಿದ್ಯಾರ್ಥಿನಿಯ ಪೊಷಕರು, ನಮ್ಮ ಮಗಳಿಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಅವಳ ಸಾವಿಗೆ ಕಾರಣವಾದ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯ ಮಾಡುವ ಮೂಲಕ ಹೋರಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ತಿಳಿಸಿದರು.

ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪರಿಸ್ಥಿತಿ ನಿಭಾಹಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು
Last Updated : Apr 25, 2019, 11:03 PM IST

ABOUT THE AUTHOR

...view details