ಕರ್ನಾಟಕ

karnataka

ETV Bharat / state

ಬೆಚ್ಚಿಬಿದ್ದ ಬಿಸಿಲೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ -EXCLUSIVE - man kidnap in raichur district lingasuguru

ನಾಲ್ವರು ದುರ್ಷ್ಕಮಿಗಳು ಪಿಸ್ತೂಲ್, ಚಾಕು ತೋರಿಸಿ ವ್ಯಕ್ತಿ ಅಪಹರಣ ಮಾಡಿರುವ ಘಟನೆ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.

ರಾಯಚೂರಿನಲ್ಲಿ ವ್ಯಕ್ತಿ ಅಪಹರಣ

By

Published : Nov 16, 2019, 5:02 PM IST

Updated : Nov 16, 2019, 5:17 PM IST

ರಾಯಚೂರು: ನಾಲ್ವರು ದುರ್ಷ್ಕಮಿಗಳು ಪಿಸ್ತೂಲ್, ಚಾಕು ತೋರಿಸಿ ವ್ಯಕ್ತಿ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.

ಲಿಂಗಸುಗೂರು ಕೇಂದ್ರ ಬಸ್ ನಿಲ್ದಾಣದ ಬಳಿ ಹಾಡುಹಗಲೇ ಒಬ್ಬ ವ್ಯಕ್ತಿಯನ್ನ ಸ್ನೇಹಿತರಂತೆ ಮಾತನಾಡಿಸಿ ಚಾಕು, ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಅಪಹರಿಸಿದ್ದಾರೆ. ಮಾರುತಿ ಸಿಯಾಜ್​ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳು ವ್ಯಕ್ತಿಯನ್ನು ಅಪರಿಸಿದ್ದಾರೆ. ವ್ಯಕ್ತಿಯನ್ನ ಅಪಹರಿಸುತ್ತಿದ್ದ ವೇಳೆ ತಡೆಯಲು ಮುಂದಾದ ಕೆಲ ಸ್ಥಳೀಯರ ಪ್ರಯತ್ನ ವಿಫಲವಾಗಿದೆ.

ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ

ಅಪಹರಣಗೊಂಡ ವ್ಯಕ್ತಿ ಹಾಗೂ ಅಪಹರಣಕಾರರು ಯಾರು ಎನ್ನುವ ಗುರುತು ಪತ್ತೆಯಾಗಿಲ್ಲ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಎಂಎಚ್(ಮಹಾರಾಷ್ಟ್ರ) ರಾಜ್ಯದ ಪಾಸಿಂಗ್​ ಹೊಂದಿರುವ MH-14, 3566 ಕಾರಿನಲ್ಲಿ ಅಪಹರಿಸಲಾಗಿದೆ. ನಾಲ್ವರು ಅಪಹರಣಾಕಾರರು ಕನ್ನಡ ಮಾತನಾಡುತ್ತಿದ್ದರೆಂದು ತಿಳಿದುಬಂದಿದೆ.

ಘಟನೆ ಬಳಿಕ ಸ್ಥಳ ಪರಿಶೀಲಿಸಿದ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. ಆದರೆ ಈ ಕುರಿತು ಇನ್ನೂ ಯಾರೊಬ್ಬರು ದೂರು ದಾಖಲಿಸಿಲ್ಲ.

Last Updated : Nov 16, 2019, 5:17 PM IST

ABOUT THE AUTHOR

...view details