ರಾಯಚೂರು: ವ್ಯಕ್ತಿಯೊಬ್ಬನನ್ನು ಕುಟುಂಬದ ಸದಸ್ಯರೇ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಅಂಬರೇಶ್(44) ಕೊಲೆಯಾದ ವ್ಯಕ್ತಿ. ಇಸ್ಪೀಟ್, ಕುಡಿತದ ಚಟಕ್ಕೆ ಬಿದ್ದಿದ್ದ ಈತ ಸಾಲ ಮಾಡಿದ್ದನಂತೆ. ಅಲ್ಲದೇ ನಿತ್ಯ ಮನೆಯಲ್ಲಿ ಕಿರುಕುಳ ನೀಡುತ್ತಿದ್ದನಂತೆ. ಇದನ್ನು ಸಹಿಸದ ಈತನ ತಾಯಿ, ಅಕ್ಕ ಹಾಗೂ ಅಕ್ಕನ ಮಗ (ಅಳಿಯ) ಮೂವರು ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ