ಕರ್ನಾಟಕ

karnataka

ETV Bharat / state

ರಾಯಚೂರು: ಕುಟುಂಬಸ್ಥರಿಂದಲೇ ವ್ಯಕ್ತಿ ಕೊಲೆ! - Man murder by his family members at Raichur

ವ್ಯಕ್ತಿಯೊಬ್ಬನನ್ನು ಕುಟುಂಬದ ಸದಸ್ಯರೇ ಕೊಲೆ ಮಾಡಿರುವ ಘಟ‌ನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಅಂಬರೇಶ್
ಅಂಬರೇಶ್

By

Published : Jan 22, 2022, 6:56 AM IST

Updated : Jan 22, 2022, 7:39 AM IST

ರಾಯಚೂರು: ವ್ಯಕ್ತಿಯೊಬ್ಬನನ್ನು ಕುಟುಂಬದ ಸದಸ್ಯರೇ ಕೊಲೆ ಮಾಡಿರುವ ಘಟ‌ನೆ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಂಬರೇಶ್(44) ಕೊಲೆಯಾದ ವ್ಯಕ್ತಿ. ಇಸ್ಪೀಟ್, ಕುಡಿತದ ಚಟಕ್ಕೆ ಬಿದ್ದಿದ್ದ ಈತ ಸಾಲ ಮಾಡಿದ್ದನಂತೆ. ಅಲ್ಲದೇ ನಿತ್ಯ ಮನೆಯಲ್ಲಿ ಕಿರುಕುಳ ನೀಡುತ್ತಿದ್ದನಂತೆ. ಇದನ್ನು ಸಹಿಸದ ಈತನ ತಾಯಿ, ಅಕ್ಕ ಹಾಗೂ ಅಕ್ಕನ ಮಗ (ಅಳಿಯ) ಮೂವರು ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹತ್ಯೆ ಮಾಡಿದ ಬಳಿಕ ಆರೋಪಿಗಳು ತಮ್ಮ ಮೇಲೆ ಅನುಮಾನ ಬಾರದಂತೆ ಶವ ರಸ್ತೆಯಲ್ಲಿ ಎಸೆದಿದ್ದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ, ಸತ್ಯ ಬಯಲಿಗೆ ಬಂದಿದೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಂಟೈನರ್ ವಾಹನಕ್ಕೆ‌ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ವಸ್ತುಗಳು

Last Updated : Jan 22, 2022, 7:39 AM IST

ABOUT THE AUTHOR

...view details