ಕರ್ನಾಟಕ

karnataka

ETV Bharat / state

'ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು' - K. Sivanagouda talks about Ministerial position

ಬಿಜೆಪಿ ಸರ್ಕಾರದಲ್ಲಿ ಪದೇ ಪದೆ ಸಚಿವರಾದವರನ್ನು ಬದಲಾಯಿಸುವ ಮೂಲಕ ಹೊಸಬರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ.

K. Sivanagouda
ಬಿಜೆಪಿ ಶಾಸಕ ಕೆ.ಶಿವನಗೌಡ

By

Published : Jan 13, 2021, 4:14 PM IST

ರಾಯಚೂರು:ಹೊಸಬರಿಗೆ, ಪ್ರದೇಶವಾರು ಹಾಗೂ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಪದೇ ಪದೆ ಸಚಿವರಾದವರನ್ನು ಬದಲಾಯಿಸುವ ಮೂಲಕ ಹೊಸಬರಿಗೆ ಅವಕಾಶ ನೀಡಬೇಕು. ಪ್ರದೇಶವಾರು, ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ನೀಡುವಂತಾಗಬೇಕು. 20 ತಿಂಗಳ ಅವಧಿ ಬಳಿಕ ಹಾಲಿ ಇರುವ ಎಲ್ಲಾ ಸಚಿವರನ್ನ ತೆಗೆದು ಹೊಸಬರಿಗೆ ಅವಕಾಶ ಕೊಡಬೇಕು. ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಬಿಜೆಪಿ ಶಾಸಕ ಕೆ.ಶಿವನಗೌಡ

ಓದಿ:ಮಾರ್ಚ್​​​ ತಿಂಗಳು ದೊಡ್ಡ ಮಟ್ಟದಲ್ಲಿ ಸಚಿವ ‌ಸಂಪುಟ ಪುನಾರಾಚನೆ ಆಗಲಿದೆ: ಸಚಿವ ಜಾರಕಿಹೊಳಿ

ಜಿಲ್ಲೆಯಲ್ಲಿ ಕಿರಿಯ ಬಿಜೆಪಿ ಶಾಸಕರಿಗೆ ಪ್ರಾತಿನಿಧ್ಯ ನೀಡಬೇಕಾಗಿದ್ದು, ಮುಂದಿನ ದಿನಗಳಲ್ಲಿ ಸರಿಪಡಿಸುವ ಭರವಸೆಯಿದೆ. ಪಕ್ಷ ನಿಷ್ಠೆ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದಿಲ್ಲ. ಕಿರಿಯರಿಗೆ ಅನ್ಯಾಯವಾಗಿದೆ. ಮುಂದೆಯಾದರೂ ನನ್ನ ಸಲಹೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details