ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿನ ಕೋವಿಡ್ ವಾರ್ಡ್ಗೆ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಭೇಟಿ ನೀಡಿದರು. ಈ ವೇಳೆ ಅವರು ರೋಗಿಗಳ ಯೋಗಕ್ಷೇಮ ವಿಚಾರಿಸಿ ಚಿಕಿತ್ಸೆ ಕುರಿತಂತೆ ರೋಗಿಗಳು ಹಾಗು ವೈದ್ಯರೊಂದಿಗೆ ಮಾಹಿತಿ ಪಡೆದರು.
ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ. ಭಯಪಡದೆ ಚಿಕಿತ್ಸೆ ಪಡೆದುಕೊಳ್ಳಿ, ಶೀಘ್ರ ಗುಣಮುಖರಾಗುವಿರಿ. ವೈದ್ಯರ ಸಲಹೆ, ಸೂಚನೆಗಳನ್ನು ಪಾಲಿಸುವಂತೆ ರೋಗಿಗಳಿಗೆ ತಿಳಿ ಹೇಳಿದರು. ಈ ವೇಳೆ ಶಾಸಕರು, ಆಸ್ಪತ್ರೆಯ ರೋಗಿಗಳ ಸಂಖ್ಯೆ, ಚಿಕಿತ್ಸೆಯ ಕುರಿತಂತೆ ಮಾಹಿತಿ ಪಡೆದುಕೊಂಡರು. ಚಿಕಿತ್ಸೆಗೆ ಬರುವಂತಹ ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೇವೆಯನ್ನು ಒದಗಿಸಬೇಕು. ಸೋಂಕಿತರಿಗೆ ಬೇಕಾಗಿರುವ ಔಷಧಿಗಳು ಮತ್ತು ಆಕ್ಸಿಜನ್, ವೆಂಟಿಲೇಟರ್, ರೆಮಿಡಿಸಿವಿರ್ ಚುಚ್ಚುಮದ್ದನ್ನು ಸೋಂಕಿತರಿಗೆ ನೀಡಿ ಬೇಗ ಗುಣಮುಖವಾಗುವಂತೆ ಚಿಕಿತ್ಸೆ ನೀಡಬೇಕು. ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವ ಕೆಲಸವಾಗಬೇಕು ಎಂದು ವೈದ್ಯರಿಗೆ ಸೂಚಿಸಿದರು.