ರಾಯಚೂರು: ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಿಗೆ ಹಾನಿ ಉಂಟಾಗಿದ್ದು, ಇಂದು ಬಡಾವಣೆಗಳಿಗೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಮಳೆಯಿಂದ ಹಾನಿಗೊಳಗಾದ ಬಡಾವಣೆಗಳಿಗೆ ಶಾಸಕ ಶಿವರಾಜ್ ಪಾಟೀಲ್ ಭೇಟಿ - MLA Shivaraja Patil city round
ಮಳೆಯಿಂದ ಹಾನಿಗೊಳಗಾದ ಬಡಾವಣೆಗಳಿಗೆ ಶಾಸಕ ಡಾ.ಶಿವರಾಜ್ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು.
![ಮಳೆಯಿಂದ ಹಾನಿಗೊಳಗಾದ ಬಡಾವಣೆಗಳಿಗೆ ಶಾಸಕ ಶಿವರಾಜ್ ಪಾಟೀಲ್ ಭೇಟಿ Raichur](https://etvbharatimages.akamaized.net/etvbharat/prod-images/768-512-03:11:02:1601286062-kn-rcr-02-mla-photo-ka10030-28092020132254-2809f-1601279574-216.jpg)
Raichur
ನಗರದ ತಗ್ಗು ಪ್ರದೇಶಗಳಾದ ಸೀಯಾತಲಾಬ, ಜಹಿರಾಬಾದ್, ಕಾಕಿನ ಕೆರೆ, ಬಸವನ ಬಾವಿ ವೃತ್ತ, ನೀರಬಾವಿ ಕುಂಟ ಸೇರಿದಂತೆ ಇತರೆ ಬಡಾವಣೆಯಲ್ಲಿ ಮಳೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಈ ಕುರಿತು ಪರಿಶೀಲನೆ ನಡೆಸಲು ಶಾಸಕರು ಭೇಟಿ ನೀಡಿದ್ದರು.
ಈ ಬಡಾವಣೆಗಳಲ್ಲಿ ಮುಂದಿನ ದಿನಗಳಲ್ಲಿ ಇಂತಹ ತೊಂದರೆಯಾಗದ ರೀತಿಯಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವ ಕುರಿತು ಜನರಿಂದ ಮಾಹಿತಿ ಪಡೆದರು. ಬಳಿಕ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿದರು.