ಕರ್ನಾಟಕ

karnataka

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸ ಪ್ಲಾನ್..

By

Published : Oct 14, 2019, 7:37 PM IST

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಯಚೂರು ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಫಲಿತಾಂಶದ ಪಟ್ಟಿಯಲ್ಲಿ ಜಿಲ್ಲೆಯನ್ನು ಟಾಪ್ 10 ಸ್ಥಾನದಲ್ಲಿ ತರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸದಂದು ಯೋಜನೆ ರೂಪಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಮುಂದಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿಯಿಂದ ಹೊಸ ಪ್ಲಾನ್

ರಾಯಚೂರು:ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಫಲಿತಾಂಶದ ಪಟ್ಟಿಯಲ್ಲಿ ಜಿಲ್ಲೆಯನ್ನು ಟಾಪ್ 10 ಸ್ಥಾನದಲ್ಲಿ ತರುವ ನಿಟ್ಟಿನಲ್ಲಿ ರಾಯಚೂರು ಜಿಲ್ಲಾ ಪಂಚಾಯತ್‌ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸದಂದು ಯೋಜನೆ ರೂಪಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಮುಂದಾಗಿದ್ದಾರೆ.

ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಸಮಾಜ, ಗಣಿತ, ಇಂಗ್ಲೀಷ್,ವಿಜ್ಞಾನ ಈ ನಾಲ್ಕು ವಿಷಯಗಳಲ್ಲಿ ಹಿಂದಿರುವುದು ಕಂಡು ಬಂದಿದೆ. ಹೀಗಾಗಿ ನಾಲ್ಕು ವಿಷಯಗಳನ್ನ ಒಂದು ತಾಸು ಹೆಚ್ಚಿನ ಅವಧಿಗೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದು ಹಾಗೂ ಶನಿವಾರ, ಭಾನುವಾರ ವಿಶೇಷ ಕ್ಲಾಸ್‌ಗಳನ್ನ ವಿಷಯವಾರು ಮಾಡಲಾಗುವುದು ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸ ಪ್ಲಾನ್..

ಶಿಕ್ಷಣ ಸಚಿವರಿಂದ ಅಭಿನಂದನೆ :ಅಲ್ಲದೇ ಕಳೆದ 10 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನೀಡುವುದು ಸೇರಿದಂತೆ ಹಲವು ಕಾರ್ಯಕ್ರಮ ರೂಪಿಸುವ ಮೂಲಕ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ಟಾಪ್ 10ಸ್ಥಾನದಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ಉದ್ದೇಶವಿದೆ ಎಂದಿದ್ದಾರೆ. ಇವರ ಉತ್ಸಾಹವನ್ನು ಕಂಡು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್ ಫೇಸ್‌ಬುಕ್‌ನ ಮೂಲಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರಿಂದ ಅಭಿನಂದನೆ

ಇನ್ನು, 2019-2020ನೇ ಸಾಲಿಗೆ ಜಿಲ್ಲೆಯ 205 ಪ್ರೌಢಶಾಲೆಗಳ 17ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ 10 ವರ್ಷಗಳ ಪ್ರಶ್ನೆಪತ್ರಿಕೆ, ಉತ್ತರ ಪ್ರತಿಕೆಯನ್ನ ನೀಡಲು 46 ಲಕ್ಷ ರೂಪಾಯಿ ವ್ಯಯವಾಗಲಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರಿಗೆ ಪ್ರಸ್ತಾವನೆ ನೀಡಲಾಗಿದೆ ಎಂದರು.

ABOUT THE AUTHOR

...view details