ಕರ್ನಾಟಕ

karnataka

ರಾಜ್ಯದಲ್ಲಿ ಎಲ್ಲಿಯೂ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ: ಸಚಿವ ಕೆ.ಜೆ.ಜಾರ್ಜ್

By

Published : Jun 26, 2023, 2:21 PM IST

ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಎಲ್ಲಿಯೂ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

k j george
ಕೆ.ಜೆ.ಜಾರ್ಜ್

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

ರಾಯಚೂರು : ರಾಜ್ಯದಲ್ಲಿ ಎಲ್ಲಿಯೂ ಅಧಿಕೃತವಾಗಿ ಹಾಗೂ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಲ್ಲಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ಹಾಗೂ ಯರಮರಸ್ ವೈಟಿಪಿಎಸ್ ಶಾಖೋತ್ಪನ್ನ ಕೇಂದ್ರಗಳಿಗೆ ಭೇಟಿಗೆ ಮುನ್ನ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಹೊಸದಾಗಿ ಸರ್ಕಾರ ರಚನೆಯಾದ ಮೇಲೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ‌ಜ್ಯೋತಿ ಯೋಜನೆ ಜಾರಿಗೆ ತರಲಾಗುತ್ತಿದೆ. ಇದೊಂದು ದೊಡ್ಡ ಯೋಜನೆಯಾಗಿದ್ದು, 2 ಕೋಟಿ 14 ಲಕ್ಷ ಫಲಾನುಭವಿಗಳು ಗೃಹ ಜ್ಯೋತಿಯೋಜನೆಯಡಿ ಬರುತ್ತಾರೆ. ಈ ಯೋಜನೆಗಾಗಿ 52 ಲಕ್ಷ ಫಲಾನುಭವಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ‌. ಸರ್ವರ್ ಸಮಸ್ಯೆಯಾಗಿದ್ದರೆ ಹೇಗೆ 52 ಲಕ್ಷ ಜನರು ನೋಂದಣಿಯಾಗುತ್ತಾರೆ. ಹೀಗಾಗಿ, ಯಾವುದೇ ಸರ್ವರ್ ಸಮಸ್ಯೆ ಇಲ್ಲ ಎಂದರು.

ವಿದ್ಯುತ್ ದರ ಹೆಚ್ಚಳ ಮಾಡಿರುವುದು ನಮ್ಮ ಸರ್ಕಾರ ಅಲ್ಲ. ಈ ಹಿಂದೆ ಬಿಜೆಪಿ ಸರ್ಕಾರ, ಅವರು ಅಂದೇ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರ ಪರಿಣಾಮದಿಂದ ಇಂದು ವಿದ್ಯುತ್ ದರ‌ ಹೆಚ್ಚಳವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ದರ ಹೆಚ್ಚಳಕ್ಕೆ ಈಗ ಬಿಜೆಪಿಯವರೇ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಣ್ಣ ಕೈಗಾರಿಕೆಗಳ ಜೊತೆ ನಮ್ಮ ಸರ್ಕಾರವಿದೆ. ಹಾಗೆಯೇ, ಆರ್‌ಟಿಪಿಎಸ್ ಕೆಲ ಘಟಕಗಳ ನವೀಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಈಗ ವೈಟಿಪಿಎಸ್ ಗುತ್ತಿಗೆ ಅವಧಿ ಮುಗಿದಿರುವ ಕುರಿತು ಮಾಹಿತಿ ಇದ್ದು, ತಾತ್ಕಾಲಿಕವಾಗಿ ಅದೇ ಕಂಪನಿ ನಿರ್ವಹಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಇದನ್ನೂ ಓದಿ :Congress Guarantee scheme: ಪೂರ್ಣ ಪ್ರಮಾಣದ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಈ ವೇಳೆ, ಶಾಸಕರಾದ ಬಸವನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ ಸೇರಿದಂತೆ ಅಧಿಕಾರಿಗಳು ಇತರರಿದ್ದರು. ಸುದ್ದಿಗೋಷ್ಠಿ ನಂತರದಲ್ಲಿ ಆರ್‌ಟಿಪಿಎಸ್ ಘಟಕಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ :Milk Price Hike: ವಿದ್ಯುತ್ ದರ ಏರಿಕೆ ಆಯ್ತು, ಈಗ ಹಾಲಿನ ದರ ಹೆಚ್ಚಿಸಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಸಿದ್ಧತೆ ನಡೆಸಿದೆ: ಪ್ರಭು ಚೌಹಾಣ್

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು? : ಕಳೆದ ಎರಡು ದಿನಗಳ ಹಿಂದೆ (ಜೂನ್​ 24) ರಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕು ಎಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ ಎಂದಿದ್ದರು.

ಇದನ್ನೂ ಓದಿ :Power tariff : ವಿದ್ಯುತ್ ತೆರಿಗೆಯನ್ನು ಶೇ 3ಕ್ಕಿಳಿಸಲು ಸರ್ಕಾರಕ್ಕೆ ಎಫ್​ಕೆಸಿಸಿಐ ಮನವಿ

ABOUT THE AUTHOR

...view details