ಕರ್ನಾಟಕ

karnataka

By

Published : Jan 12, 2021, 8:40 PM IST

ETV Bharat / state

ಸಚಿವ ಸ್ಥಾನದಿಂದ ಕೈ ಬಿಡುವ ಬಗ್ಗೆ ಯಾರೂ ತಿಳಿಸಿಲ್ಲ: ಶಶಿಕಲಾ ಜೊಲ್ಲೆ

ಸಚಿವ ಸ್ಥಾನದಿಂದ ಕೈ ಬಿಟ್ಟರೆ ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿ ಇರುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

shashikala-jolle
ಶಶಿಕಲಾ ಜೊಲ್ಲೆ

ರಾಯಚೂರು: ನನ್ನನ್ನು ಸಚಿವ ಸ್ಥಾನದಿಂದ ಕೈ ಬಿಡುವ ಬಗ್ಗೆ ಇದುವರೆಗೆ ಯಾರೂ ತಿಳಿಸಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಶಶಿಕಲಾ ಜೊಲ್ಲೆ, ಸಚಿವೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಮುಖಂಡರು, ವರಿಷ್ಠರು ಯಾರೂ ಕೂಡ ಈ ಬಗ್ಗೆ ಚರ್ಚೆ ಮಾಡಿಲ್ಲ. 3ನೇ ಬಾರಿ ನನ್ನನ್ನು ಸಂಪುಟದಿಂದ ಕೈ ಬಿಡುತ್ತಾರೆ ಎನ್ನುವಂತಹ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದರು.

ಓದಿ:ಸಚಿವ ಸಂಪುಟ ವಿಸ್ತರಣೆ : ಸಿಎಂ, ಸಚಿವರ ಮಧ್ಯೆ ಯಾಕಿಷ್ಟು ಗೊಂದಲ?

ಒಂದು ವೇಳೆ ಸಚಿವ ಸ್ಥಾನದಿಂದ ಕೈ ಬಿಟ್ಟರೆ ಮುಂದಿನ ನಡೆ ಏನು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಾಮಾನ್ಯ ಕಾರ್ಯಕರ್ತೆಯಾಗಿ ಪಕ್ಷಕ್ಕೆ ಬಂದಿದ್ದೇನೆ. ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ನಾನು ಕೆಲಸ ಮಾಡಿದ್ದೇನೆ. ಈಗ ಅವಕಾಶ ಕೊಟ್ಟಿದ್ದಾರೆ. ಅದಕ್ಕೆ ಬದ್ಧಳಾಗಿ ಕೆಲಸ ಮಾಡುತ್ತಿದ್ದೇನೆ. ಸಚಿವ ಸ್ಥಾನದಿಂದ ಕೈಬಿಟ್ಟರೆ ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿ ಇರುತ್ತೇನೆ. ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ ಎಂದರು.

For All Latest Updates

ABOUT THE AUTHOR

...view details