ಕರ್ನಾಟಕ

karnataka

ETV Bharat / state

ರಾಯಚೂರು: ಕೋವಿಡ್​ ಕೇರ್​ ಸೆಂಟರ್​ನಲ್ಲಿ ವೃದ್ಧೆ ಆತ್ಮಹತ್ಯೆಗೆ ಶರಣು

ರಾಯಚೂರಿನ ಯರಮರಸ್​ನಲ್ಲಿರುವ ಕೋವಿಡ್ ಕೇರ್ ಸೆಂಟರ್​ನ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ‌ಗೆ ಶರಣಾಗಿದ್ದಾರೆ.

By

Published : May 3, 2021, 1:50 PM IST

Raichur
ವೃದ್ಧೆ ಆತ್ಮಹತ್ಯೆಗೆ ಶರಣು

ರಾಯಚೂರು: ಕೋವಿಡ್ ಕೇರ್ ಸೆಂಟರ್​ನ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ವೃದ್ಧೆ ಆತ್ಮಹತ್ಯೆ‌ಗೆ ಶರಣಾಗಿರುವ ಘಟನೆ ಯರಮರಸ್​ನಲ್ಲಿ ನಡೆದಿದೆ.

ನಗರದ ನಿವಾಸಿ ಮಾರೆಮ್ಮ(79) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇತ್ತೀಚೆಗೆ ಮಾರೆಮ್ಮ ಆಪ್ತ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಕೇಂದ್ರದಲ್ಲಿ ವೃದ್ಧೆ ಜೊತೆ ಮೊಮ್ಮಗ ಸಹ ಇದ್ದನೆಂದು ತಿಳಿದುಬಂದಿದೆ.

ಸದ್ಯ ರಾಯಚೂರು ಗ್ರಾಮೀಣ ಠಾಣಾ‌ ವ್ಯಾಪಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details