ರಾಯಚೂರು:ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ದೇವರಭೂಪುರದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದ ವೃದ್ಧ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಭೀತಿ ಹೆಚ್ಚಿಸಿದೆ.
ದೇವರಭೂಪುರದಲ್ಲಿ ವಾಂತಿ ಭೇದಿಯಿಂದ ವೃದ್ಧ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ - ರಾಯಚೂರು ಜಿಲ್ಲೆಯ ಲಿಂಗಸುಗೂರು
ದೇವರಭೂಪುರ ವಾಂತಿ ಭೇದಿ ಪ್ರಕರಣದಿಂದ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಮೃತಪಟ್ಟಿದ್ದಾರೆ.

rcr
ಮೃತ ಮಲ್ಲಪ್ಪ ಕಾಳಪ್ಪ ಗುರುಗುಂಟ (65) ಎರಡು ದಿನದ ಹಿಂದೆ ವಾಂತಿ ಭೇದಿಯಿಂದ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ಆಸ್ಪತ್ರೆಯಲ್ಲಿಯೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.