ಕರ್ನಾಟಕ

karnataka

ETV Bharat / state

'ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಐದು ದಿನ ಮಾತ್ರ ಅವಕಾಶ' - Ganesh Festival

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶ ಮಂಡಳಿಗಳು ಪರವಾನಗಿ ಪಡೆದುಕೊಳ್ಳುವುದು ಅಗತ್ಯ. ಪ್ರತಿಷ್ಠಾಪನೆ ಮಾಡುವ ಗಣೇಶಗಳಿಗೆ ಐದು ದಿನ ನಿಗದಿಪಡಿಸಲಾಗಿದೆ. ನಗರದ ಕಾಸ ಭಾವಿಯಲ್ಲಿ ಮೂರ್ತಿಗಳ ನಿಮಜ್ಜನಕ್ಕೆ ಅವಕಾಶ ಕಲ್ಪಿಸಲಾಗುವುದು. ಹಬ್ಬದ ಸಮಯದಲ್ಲಿ ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಕೊರೊನಾ ಮುಂಜಾಗೃತಾ ಕ್ರಮಗಳ ಕುರಿತು ಶಾಂತಿಪಾಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವಿವರಿಸಿದರು.

Peacekeeping Meeting in Raichur About Ganesh Festival
ಶಾಂತಿ ಪಾಲನಾ ಸಭೆ

By

Published : Aug 19, 2020, 8:52 PM IST

ರಾಯಚೂರು:ಗಣೇಶ ಪ್ರತಿಷ್ಠಾಪನೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು ನಗರ ಹಾಗೂ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶಗಳಿಗೆ 5 ದಿನ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ ಸಾರ್ವಜನಿಕರು ನೈಜ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ಹೇಳಿದ ನಿಯಮ ಪಾಲನೆ ಜೊತೆಗೆ ಶ್ರದ್ಧಾ ಭಕ್ತಿಯಿಂದ ಸಾರ್ವಜನಿಕರು ಹಬ್ಬವನ್ನು ಆಚರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಶಾಂತಿ ಪಾಲನಾ ಸಭೆ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶ ಮಂಡಳಿಗಳು ಪರವಾನಗಿ ಪಡೆದುಕೊಳ್ಳುವುದು ಅಗತ್ಯ. ಪ್ರತಿಷ್ಠಾಪನೆ ಮಾಡುವ ಗಣೇಶಗಳಿಗೆ ಐದು ದಿನ ನಿಗದಿಪಡಿಸಲಾಗಿದೆ. ನಗರದ ಕಾಸ ಭಾವಿಯಲ್ಲಿ ನಿಮಜ್ಜನಕ್ಕೆ ಅವಕಾಶ ಕಲ್ಪಿಸಲಾಗುವುದು. ಹಬ್ಬದ ಸಮಯದಲ್ಲಿ ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಕೊರೊನಾ ಮುಂಜಾಗೃತಾ ಕ್ರಮಗಳ ಕುರಿತು ಅವರು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ದುರ್ಗೇಶ್, ಜಿ.ಪಂ ಸಿಇಓ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ABOUT THE AUTHOR

...view details