ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆ ಅನೇಕರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನಿಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.
ರಾಯಚೂರು: ಕ್ವಾರಂಟೈನಿಗಳ ಊಟದಲ್ಲಿ ಹುಳು ಪತ್ತೆ... ಫೋಟೋ ವೈರಲ್ - ಕ್ವಾರಂಟೈನಿಗಳಿಗೆ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ವಲಸೆ ಹೋಗಿ ರಾಯಚೂರು ಜಿಲ್ಲೆಗೆ ಮರಳಿದ ಕಾರ್ಮಿಕರು ಮತ್ತು ಹಲವು ಶಂಕಿತರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು ಇವರಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
![ರಾಯಚೂರು: ಕ್ವಾರಂಟೈನಿಗಳ ಊಟದಲ್ಲಿ ಹುಳು ಪತ್ತೆ... ಫೋಟೋ ವೈರಲ್ Poor quality food delivery to quarantines](https://etvbharatimages.akamaized.net/etvbharat/prod-images/768-512-7363743-thumbnail-3x2-lek.jpg)
ಕಳಪೆ ಗುಣಮಟ್ಟದ ಆಹಾರ ವಿತರಣೆ
ಕಳಪೆ ಗುಣಮಟ್ಟದ ಆಹಾರ ವಿತರಣೆ
ವಲಸೆ ಹೋಗಿ ಜಿಲ್ಲೆಗೆ ಮರಳಿದ ಕಾರ್ಮಿಕರು ಮತ್ತು ಹಲವು ಜನರನ್ನು ದೇವದುರ್ಗ ಪಟ್ಟಣದ ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಕೇಂದ್ರದಲ್ಲಿರುವವರಿಗೆ ಕಳಪೆ ಆಹಾರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನಕ್ಕೆ ತಂದರೂ ಸಹ ಕ್ಯಾರೆ ಎನ್ನುತ್ತಿಲ್ಲ ಎಂದು ಕ್ವಾರಂಟೈನಿಗಳು ಆರೋಪಿಸುತ್ತಿದ್ದಾರೆ. ಜೊತೆಗೆ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಈ ಕುರಿತಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.