ಕರ್ನಾಟಕ

karnataka

ETV Bharat / state

ರಾಯಚೂರು: ವಿದ್ಯುತ್ ತಂತಿ ತಗುಲಿ ರೈತ ಸಾವು

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಬೂರನಪುರ ಗ್ರಾಮದ ಬಳಿ ವಿದ್ಯುತ್‌ ತಂತಿ ತಗುಲಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

By

Published : May 6, 2020, 12:56 PM IST

Raichur: Farmer died of electric shock
ರಾಯಚೂರು: ವಿದ್ಯುತ್ ತಂತಿ ತಗುಲಿ ರೈತ ಸಾವು

ರಾಯಚೂರು:ವಿದ್ಯುತ್‌ ತಂತಿ ತಗುಲಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಾನವಿ ತಾಲೂಕಿನ ಬೂರನಪುರ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಬಾಬು ಮಹೆಬೂಬು(45) ಮೃತ ರೈತ. ಬಾಬು 4 ಎಕರೆ ಜಮೀನು ಹೊಂದಿದ್ದು, ಕೆಲಸಕ್ಕಾಗಿ ತನ್ನ ಹೊಲಕ್ಕೆ ತೆರಳಿದ್ದ. ಈ ವೇಳೆ ಮಳೆ, ಗಾಳಿಗೆ ಕೆಳಗೆ ಬಿದಿದ್ದ ವಿದ್ಯುತ್ ತಂತಿ ತಗುಲಿ ಅದರ ಹೊಡೆತಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮಾನವಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ABOUT THE AUTHOR

...view details