ಕರ್ನಾಟಕ

karnataka

ETV Bharat / state

ಪ್ರಾಯೋಜಿತ ಕಾರ್ಯಗಳನ್ನು ನೀಡಿ: ಸರ್ಕಾರಕ್ಕೆ ಕಲಾವಿದರ ಮೊರೆ - ರಾಯಚೂರು ವಿವಿಧ ಬೇಡಿಕೆ ಈಡೇರಿಕೆಗಾಗಿ ಕಲಾವಿದರ ಪ್ರತಿಭಟನೆ

ಕೋವಿಡ್​​ ಕಾವಿಗೆ ನಲುಗಿರುವ ಕಲಾವಿದರು ಕೆಲಸಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ. ರಾಯಚೂರು ಜಿಲ್ಲಾ ಕಲಾವಿದರ ಸಂಘದ ಕಾರ್ಯಕರ್ತರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪ್ರಾಯೋಜಿತ ಕಾರ್ಯಕ್ರಮ ನಡೆಸಲು ಅವಕಾಶ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಮಾಡಿದರು.

Raichuru Artists Association activists protest
ರಾಯಚೂರು ಕಲಾವಿದರ ಪ್ರತಿಭಟನೆ

By

Published : Aug 24, 2020, 6:55 PM IST

ರಾಯಚೂರು: ಕೊರೊನಾ ಹಿನ್ನೆಲೆ ಕಲಾವಿದರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಪರಿಹಾರ ಘೋಷಿಸಬೇಕು ಇಲ್ಲವೆ ಪ್ರಾಯೋಜಿತ ಕಾರ್ಯಕ್ರಮ ನೀಡಬೇಕು ಎಂದು ರಾಯಚೂರು ಜಿಲ್ಲಾ ಕಲಾವಿದರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. ರಾಜ್ಯದಲ್ಲಿ ಸಾವಿರಾರು ವೃತ್ತಿ ಕಲಾವಿದರು ಕಲೆಯನ್ನೆ ನಂಬಿ ಜೀವನ ನಡೆಸುತ್ತಿದ್ದಾರೆ. ಲಾಕ್​ಡೌನ್​​ ಅನ್​ಲಾಕ್ ಆದ ನಂತರ ಎಲ್ಲಾ ಕ್ಷೇತ್ರದ ಕಾರ್ಮಿಕರಿಗೆ ಕೆಲಸ ದೊರೆತ್ತಿದೆ. ಅದರೆ ವೃತ್ತಿ ಕಲಾವಿದರಿಗೆ ಮಾತ್ರ ಅವಕಾಶ ದೊರೆಯುತ್ತಿಲ್ಲ.

ರಾಯಚೂರು ಜಿಲ್ಲಾ ಕಲಾವಿದರ ಸಂಘದ ಪ್ರದಾಧಿಕಾರಿಗಳ ಪ್ರತಿಭಟನೆ

ಅಲ್ಲದೆ ರಾಜ್ಯ ಸರ್ಕಾರ ಘೋಷಿಸಿದ ಪರಿಹಾರ ಎಲ್ಲರಿಗೂ ತಲುಪಿಲ್ಲ. ಕೂಡಲೇ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪ್ರಾಯೋಜಿತ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಬೇಕು. ಕಲಾವಿದರಿಗೆ ಪ್ರತಿ ತಿಂಗಳು 10 ಸಾವಿರ ಪ್ರೋತ್ಸಾಹ ಧನ ನೀಡಿಕೆ ಸೇರಿದಂತೆ ಇತರೆ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details