ಕರ್ನಾಟಕ

karnataka

ETV Bharat / state

ಮಂತ್ರಾಲಯದಲ್ಲಿ ಇಂದಿನಿಂದ ರಾಯರ ಸಪ್ತ ರಥೋತ್ಸವ ಆರಂಭ - ಮಂತ್ರಾಲಯ

ಕೋವಿಡ್-19 ಹಿನ್ನೆಲೆಯಲ್ಲಿ ಸಪ್ತ ರಥೋತ್ಸವವನ್ನ ಸರಳವಾಗಿ ನೇರವೇರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ಪೂಜಾ ಕೈಂಕರ್ಯಗಳು ನಡೆಯಲಿವೆ. ಈ ಮಹೋತ್ಸವದಲ್ಲಿ ಶ್ರೀಮಠದ ಸಿಬ್ಬಂದಿ, ಅಧಿಕಾರಿಗಳು ಹೊರತುಪಡಿಸಿ ಉಳಿದ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾಯರ ಸಪ್ತ ರಥೋತ್ಸವ ಆರಂಭ
ರಾಯರ ಸಪ್ತ ರಥೋತ್ಸವ ಆರಂಭ

By

Published : Aug 2, 2020, 9:27 AM IST

ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯದ ಗುರು ಶ್ರೀರಾಘವೇಂದ್ರ ಸ್ವಾಮೀಜಿಯವರ 379ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಸಪ್ತ ರಥೋತ್ಸವ ಆರಂಭವಾಗಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸಪ್ತ ರಥೋತ್ಸವವನ್ನ ಸರಳವಾಗಿ ನೇರವೇರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ಪೂಜಾ ಕೈಂಕರ್ಯಗಳು ನೆರವೇರಲಿವೆ. ಈ ಮಹೋತ್ಸವದಲ್ಲಿ ಶ್ರೀಮಠದ ಸಿಬ್ಬಂದಿ, ಅಧಿಕಾರಿಗಳು ಹೊರತುಪಡಿಸಿ ಉಳಿದ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆ. 4ರಂದು ಪೂರ್ವರಾಧನೆ, ಆ. 5 ರಂದು ಮಧ್ಯಾರಾಧನೆ, ಆ. 6 ರಂದು ಉತ್ತರಾರಾಧನೆ ನಡೆಯಲಿದೆ. ಇಂದು ಶ್ರೀಮಠದ ಪೀಠಾಧಿಪತಿಗಳಿಂದ ಧ್ವಜಾರೋಹಣ ನೇರವೇರಿಸುವ ಮೂಲಕ ಸಪ್ತ ರಥೋತ್ಸವಕ್ಕೆ ಚಾಲನೆ ಸಿಗಲಿದೆ.

ರಾಯರ ಮಠದಲ್ಲಿ ನಡೆಯುವ ಈ ಕಾರ್ಯಕ್ರಮಗಳನ್ನ ಮಂತ್ರಾಲಯದ ವಾಹಿನಿ ಯುಟ್ಯೂಬ್ ಚಾನಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದೆಂದು ಆಡಳಿತ ಮಂಡಳಿ ತಿಳಿಸಿದೆ.

ABOUT THE AUTHOR

...view details